ತಾಳಿಕೋಟೆಯಲ್ಲಿ ಗಂಡನಿಗೆ ಕೈಕೊಟ್ಟು ಪಕ್ಕದ ಮನೆಯವನ ಜತೆ ಪತ್ನಿ ಪರಾರಿ.. ಪತಿ ನೇಣಿಗೆ ಶರಣು

author img

By

Published : Sep 25, 2021, 11:14 AM IST

ವೆಂಕಟೇಶ ದ್ವಾರನಹಳ್ಳಿ

ವಿಜಯಪುರದಲ್ಲಿ ಪ್ರೀತಿಸಿ ಮದುವೆಯಾದವಳು ಸೋದರ ಸಂಬಂಧಿ ಜತೆ ಓಡಿ ಹೋಗಿದ್ದು, ಮನನೊಂದ ಪತಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ವಿಜಯಪುರ: ಪ್ರೀತಿಸಿ ಮದುವೆಯಾದವಳು ಪಕ್ಕದ ಮನೆಯವನ ಜೊತೆ ಓಡಿ ಹೋಗಿದ್ದಕ್ಕೆ ಮನನೊಂದ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.

ವೆಂಕಟೇಶ ದ್ವಾರನಹಳ್ಳಿ(25) ಮೃತ ವ್ಯಕ್ತಿ. ಆತ್ಮಹತ್ಯೆಗೂ ಮುನ್ನ ತನ್ನ ಸಾವಿಗೆ ಯಾರು ಕಾರಣ ಎಂಬುದನ್ನು ವಿಡಿಯೋ ಮಾಡಿ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ್ದಾನೆ. ಈ ವಿಡಿಯೋದಲ್ಲಿ ಆತ ‘ನನ್ನ ಸಾವಿಗೆ ಶ್ರೀಶೈಲ್​ ಕಾರಣ’ ಎಂದು ಆರೋಪಿಸಿದ್ದಾನೆ. ವಿಡಿಯೋ ನೋಡಿದ ಸ್ಥಳೀಯರು, ಜಮೀನಿನಲ್ಲಿ ನೇಣಿಗೆ ಶರಣಾಗಿ ಒದ್ದಾಡುತ್ತಿದ್ದ ಅವನ ಪ್ರಾಣ ಉಳಿಸಲು ಯತ್ನಿಸಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಆತ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಕೊಲೆ

ವೆಂಕಟೇಶ್​​ ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಪತ್ನಿ, ಪಕ್ಕದ ಮನೆಯ ಸೋದರ ಸಂಬಂಧಿ ಶ್ರೀಶೈಲ್​ ಜತೆ ಓಡಿ ಹೋಗಿದ್ದಾಳೆ. ಈ ಸಂಬಂಧ ವೆಂಕಟೇಶ್​​ ತಾಳಿಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಆದರೆ, ಆಕೆ ನಾನು ಶ್ರೀಶೈಲ್ ಜತೆಯೇ ಇರುವುದಾಗಿ ಹೇಳಿಕೆ ಕೊಟ್ಟಿದ್ದಳು. ಬಳಿಕ ಮನನೊಂದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.