ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಬಿ ಎಮ್ ಪಾಟೀಲ ಒತ್ತಾಯ

author img

By

Published : Nov 28, 2022, 8:09 PM IST

BM Patil is the president of the district unit of Panchmasali community

ಪಂಚಮಸಾಲಿ ಸಮುದಾಯಕ್ಕೆ ಡಿಸೆಂಬರ್ 12 ರಿಂದ 19 ರ ಒಳಗೆ ಹಿಂದುಳಿದ ವರ್ಗದ ಆಯೋಗದಿಂದ ವರದಿ ತರಿಸಿಕೊಂಡು, 2 ಎ ಮೀಸಲಾತಿ ನೀಡಬೇಕು, ಇಲ್ಲದಿದ್ದರೆ 25 ಲಕ್ಷ ಜನರನ್ನು ಸೇರಿಸಿ ಬೃಹತ್ ಹೋರಾಟ ಮಾಡಲಾಗುತ್ತದೆ ಎಂದು ಪಂಚಮಸಾಲಿ ಸಮುದಾಯದ ಜಿಲ್ಲಾ ಘಟಕದ ಅಧ್ಯಕ್ಷ ಬಿ ಎಮ್ ಪಾಟೀಲ ಹೇಳಿದರು.

ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ ಡಿಸೆಂಬರ್ 12 ರಿಂದ 19 ರ ಒಳಗೆ ಹಿಂದುಳಿದ ವರ್ಗದ ಆಯೋಗದಿಂದ ವರದಿ ತರಿಸಿಕೊಂಡು, 2 ಎ ಮೀಸಲಾತಿ ನೀಡಬೇಕು, ಇಲ್ಲದಿದ್ದರೆ 25 ಲಕ್ಷ ಜನರನ್ನು ಸೇರಿಸಿ ಬೃಹತ್ ಹೋರಾಟ ಮಾಡಲಾಗುತ್ತದೆ ಎಂದು ಪಂಚಮಸಾಲಿ ಸಮಾಜದ ಮುಖಂಡ ಬಿ ಎಮ್ ಪಾಟೀಲ ಹೇಳಿದರು.

ಈ ಕುರಿತು ವಿಜಯಪುರ ನಗರದಲ್ಲಿ ಮಾದ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ಪಂಚಮಸಾಲಿ ಸಮುದಾಯದ ಜಿಲ್ಲಾ ಘಟಕದ ಅಧ್ಯಕ್ಷ ಬಿ ಎಮ್ ಪಾಟೀಲ ಮಾತನಾಡುತ್ತ ಡಿಸೆಂಬರ್ 19 ರ ಒಳಗೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಯನ್ನು ಸಿಎಂ ಘೋಷಣೆ ಮಾಡದೇ ಇದ್ದರೆ, ಬೆಳಗಾವಿ ಸುವರ್ಣ ಸೌಧದ ಮುಂದು ಡಿಸೆಂಬರ್ 22 ರಂದು 25 ಲಕ್ಷ ಜನರನ್ನು ಸೇರಿಸಿ ‌ಹೋರಾಟ ಮಾಡುತ್ತೇವೆ ಎಂದರು.

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಲು ಬಿ ಎಮ್ ಪಾಟೀಲ ಒತ್ತಾಯ

ಒಂದು ವೇಳೆ ಮೀಸಲಾತಿ ನೀಡಿದರೆ ಅದೇ ಡಿಸೆಂಬರ್​ 22 ರಂದು ಸಿಎಂ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಆಯೋಜನೆ ಮಾಡುತ್ತೇವೆ. ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ಪಂಚಮಸಾಲಿ ಸಮುದಾಯವನ್ನು ಇನ್ನಷ್ಟು ಸಂಘಟಿಸುವ ನಿಟ್ಟಿನಲ್ಲಿ ಇಂದು ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಗೌರವ ಅಧ್ಯಕ್ಷರನ್ನು ನೇಮಕ ಮಾಡಿ ಅವರಿಗೆ ಆದೇಶ ಪ್ರತಿಗಳನ್ನು ‌ಕೊಡುತ್ತಿದ್ದೇವೆ ಎಂದರು.

ಇದನ್ನೂ ಓದಿ:ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.