ಯತ್ನಾಳ್​ಗೆ ಕರೆ ಮಾಡಿ ಸಿಎಂ ಬೊಮ್ಮಾಯಿ ಹೇಳಿದ್ದೇನು?

author img

By

Published : Sep 11, 2021, 7:32 AM IST

Updated : Sep 11, 2021, 7:53 AM IST

ಸಿಎಂ ಬಸವರಾಜ ಬೊಮ್ಮಾಯಿ

ಗಣೇಶ ಹಬ್ಬದ ಆಚರಣೆಗೆ ನಿಯಮಗಳನ್ನು ಸಡಿಲಗೊಳಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿಯವರು ವಿಜಯಪುರ ಶಾಸಕ ಯತ್ನಾಳ್​ಗೆ ಕರೆ ಮಾಡಿ ತಿಳಿಸಿದ್ದಾರೆ.

ವಿಜಯಪುರ: ಗಣೇಶ ಹಬ್ಬಕ್ಕೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಸಡಿಲಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ಮಾಡಿ ಬಸನಗೌಡ ಪಾಟೀಲ ಯತ್ನಾಳ್​ಗೆ ತಿಳಿಸಿದ್ದಾರೆ. ಈ ಕುರಿತು ಯತ್ನಾಳ್​ ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಶುಕ್ರವಾರ ಮಧ್ಯಾಹ್ನ ಸಿಎಂ ಬೊಮ್ಮಾಯಿ ನನಗೆ ಕರೆ ಮಾಡಿ, ಗಜಾನನ ಉತ್ಸವಕ್ಕೆ ಹೇರಲಾದ ನಿರ್ಬಂಧಗಳನ್ನು ಸಡಿಲಿಸಿ ನೇರವಾಗಿ ಆಯಾಯ ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ್ದೇವೆ. ಯಾವುದೇ ಕಾರಣಕ್ಕೂ ಉತ್ಸವಕ್ಕೆ ತಡೆಯಾಗದಂತೆ ಶೀಘ್ರ ಸೂಚನೆ ನೀಡಲಾಗುವುದು. ನಿಮ್ಮ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ನನಗೆ ತಿಳಿಸಿದರು.

ಕರೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಧನ್ಯವಾದಗಳು ಎಂದು ಶಾಸಕ ಯತ್ನಾಳ್​ ಫೇಸ್​ಬುಕ್​​ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ನಿಯಮಗಳನ್ನು ಸ್ವಲ್ಪ ಸಡಿಲಿಕೆ ಮಾಡಿ ಹಬ್ಬಕ್ಕೆ ಅವಕಾಶ: ಅಶ್ವತ್ಥ ನಾರಾಯಣ

Last Updated :Sep 11, 2021, 7:53 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.