ETV Bharat / state

ಮೀಸಲಾತಿ: ಸರ್ಕಾರಕ್ಕೆ ಏಪ್ರಿಲ್ 14ರವರೆಗೆ ಗಡುವು- ಬಸವ ಜಯಮೃತ್ಯುಂಜಯ ಶ್ರೀ

author img

By

Published : Apr 7, 2022, 10:18 PM IST

ಬಸವ ಜಯಮೃತ್ಯುಂಜಯ ಶ್ರೀ
ಬಸವ ಜಯಮೃತ್ಯುಂಜಯ ಶ್ರೀ

ಮಸೀದಿ ಧ್ವನಿವರ್ಧಕಗಳಿಂದ ಶಬ್ದ ಮಾಲಿನ್ಯವಾಗದಂತೆ ಆಯಾ ಸಮಾಜದ ಧರ್ಮಗುರುಗಳು ತಿಳಿ ಹೇಳಬೇಕು. ನಾವು ಮೊದಲು ಮಠದಲ್ಲಿ ಜೋರಾಗಿ ಧ್ವನಿವರ್ಧಕ ಹಾಕುತ್ತಿದ್ದೆವು. ಇದರಿಂದ ಮಕ್ಕಳ ವಿದ್ಯಾಭ್ಯಾಸ, ಹಿರಿಯರಿಗೆ ಕಿರಿಕಿರಿಯಾಗುತ್ತಿತ್ತು. ಇದೀಗ ಶಬ್ದ ಕಡಿಮೆ ಇಡುತ್ತಿದ್ದೇವೆ ಎಂದು ಕೂಡಲ ಸಂಗಮ ಶ್ರೀಗಳು ಹೇಳಿದರು.

ವಿಜಯಪುರ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕೆಂದು ಕಳೆದ ಒಂದೂವರೆ ವರ್ಷದಿಂದ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಆದರೆ, ಸರ್ಕಾರ ನಮ್ಮ ಹೋರಾಟಕ್ಕೆ ಸ್ಪಂದಿಸಿಲ್ಲ.‌ ಈಗ ಕೊನೆ ಬಾರಿ ಏಪ್ರಿಲ್ 14ರವರೆಗೆ ಗಡುವು ನೀಡಿದ್ದೇವೆ ಎಂದು ಕೂಡಲಸಂಗಮದ ಬಸವ ಜಯಮೃತ್ಯುಂಜಯ ಶ್ರೀಗಳು ಎಚ್ಚರಿಕೆ ನೀಡಿದರು.


ವಿಜಯಪುರದಲ್ಲಿ ಮಾತನಾಡಿದ ಅವರು, ಏಪ್ರಿಲ್ 14ರೊಳಗಾಗಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಿದರೆ ಏ. 20ರಂದು ಕೂಡಲಸಂಗಮದಲ್ಲಿ ಅಭಿನಂದನೆ ಸಲ್ಲಿಸಲಾಗುವುದು. ನೀಡದಿದ್ದರೆ ಮತ್ತೆ ತಾರ್ಕಿಕ ಅಂತ್ಯಕ್ಕಾಗಿ ಹೋರಾಟ ನಡೆಸಲಾಗುವುದು ಎಂದು ಹೇಳಿದರು. ಈಗಾಗಲೇ ಎರಡು ಬಾರಿ ಸರ್ಕಾರಕ್ಕೆ ಗಡುವು ನೀಡಲಾಗಿತ್ತು. ಆದರೆ, ಸರಿಯಾಗಿ ಸ್ಪಂದಿಸಿಲ್ಲ. ಈಗ ಮತ್ತೊಮ್ಮೆ ಮಾತುಕತೆ ನಡೆಸಿದ್ದು, ಸರ್ಕಾರ ಹಾಗೂ ವಿರೋಧ ಪಕ್ಷಗಳು ಸಕಾರಾತ್ಮಕ ಸ್ಪಂದನೆ ನೀಡಿವೆ. ಹೀಗಾಗಿ, ಈ ಬಾರಿ ಮೀಸಲಾತಿ ದೊರೆಯಬಹುದು ಎಂದು ಆಶಾಭಾವನೆ ಹೊಂದಿದ್ದೇವೆ ಎಂದರು.

10 ರಂದು ಚೆನ್ನಮ್ಮ ಮೂರ್ತಿ ಪ್ರತಿಷ್ಠಾಪನೆ: ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿಯಲ್ಲಿ ಜಿಲ್ಲೆಯಲ್ಲಿ‌‌ ಮೊದಲು ಬಾರಿ ವೀರರಾಣಿ ಕಿತ್ತೂರ ಚೆನ್ನಮ್ಮ ಪ್ರತಿಮೆಯನ್ನು ಹಾಗೂ ಪಂಚಮಸಾಲಿ 2ಎ ಮೀಸಲಾತಿ ಹಕ್ಕೊತ್ತಾಯ ಕಾರ್ಯಕ್ರಮ ಏ.10ರಂದು ಆಯೋಜಿಸಲಾಗಿದೆ. ಅಂದು ಪಂಚಮಸಾಲಿ ಸಮುದಾಯದ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ. 8ಲಕ್ಷ ವೆಚ್ಚದ ಕಂಚಿನ ಪ್ರತಿಮೆ ಅನಾವರಣಗೊಳ್ಳಲಿದೆ ಎಂದು ಶ್ರೀಗಳು ಹೇಳಿದರು.

ಇದನ್ನೂ ಓದಿ: ಖಲಿಸ್ತಾನ್ ಚಳವಳಿಗೆ ಗೊಬ್ಬರ ಹಾಕಿದ್ದು ಕಾಂಗ್ರೆಸ್, ಬಲಿಯಾಗಿದ್ದು ಇಂದಿರಾಗಾಂಧಿ: ಸಿ.ಟಿ.ರವಿ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.