ಯಾರು ಯಾರನ್ನೂ ಮುಗಿಸಲು ಸಾಧ್ಯವಿಲ್ಲ : HDKಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ತಿರುಗೇಟು

author img

By

Published : Oct 16, 2021, 7:05 PM IST

Updated : Oct 16, 2021, 7:11 PM IST

dk-shivakumar

ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸಿಡಿ ಪ್ರಕರಣದ ಕುರಿತು ಮಾತನಾಡಿ, ಆ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಅದರ ಬಗ್ಗೆ ಹೇಗೆ ಮಾತನಾಡಲಿ. ವಿಷಯ ತಿಳಿದುಕೊಂಡು ಮಾತನಾಡುತ್ತೇನೆ..

ವಿಜಯಪುರ : ಯಾರು ಯಾರನ್ನು ಮುಗಿಸಲು ಸಾಧ್ಯವಿಲ್ಲ. ಅದು ಕೇವಲ ರಾಜಕಾರಣದ ಮಾತು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​​ ತಿರುಗೇಟು ನೀಡಿದರು.

ಹೆಚ್ ​ಡಿ ಕುಮಾರಸ್ವಾಮಿ ಹೇಳಿಕೆಗೆ ಡಿ ಕೆ ಶಿವಕುಮಾರ್ ತಿರುಗೇಟು ನೀಡಿರುವುದು..

ಜಿಲ್ಲೆಯ ಸಿಂದಗಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನಲ್ಲಿ ಅಲ್ಪಸಂಖ್ಯಾತರನ್ನು ಮುಗಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾರನ್ನು ಯಾರು ಮುಗಿಸಲು ಸಾಧ್ಯವಿಲ್ಲ. ಅದು ಕೇವಲ ರಾಜಕಾರಣದ ಮಾತಾಗಿದೆ ಎಂದರು.

ಮುಗಿದ ಅಧ್ಯಾಯ : ಕಾಂಗ್ರೆಸ್ ನಾಯಕರಾದ ಉಗ್ರಪ್ಪ ಹಾಗೂ ಸಲೀಂ ಆರೋಪ ಕುರಿತು ಪ್ರತಿಕ್ರಿಯೆ ನೀಡಿದ ಡಿಕೆಶಿ ಅವರು, ಅದೊಂದು ಮುಗಿದ ಅಧ್ಯಾಯ ಎಂದು ಹೇಳಿದರು.‌

ಶಾಸಕ ಯತ್ನಾಳ ಸಿಡಿ ಪ್ರಕರಣ ಪ್ರತಿಕ್ರಿಯೆಗೆ ನಕಾರ : ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸಿಡಿ ಪ್ರಕರಣದ ಕುರಿತು ಮಾತನಾಡಿ, ಆ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಅದರ ಬಗ್ಗೆ ಹೇಗೆ ಮಾತನಾಡಲಿ. ವಿಷಯ ತಿಳಿದುಕೊಂಡು ಮಾತನಾಡುತ್ತೇನೆ ಎಂದರು.

Last Updated :Oct 16, 2021, 7:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.