ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ

author img

By

Published : Oct 15, 2021, 1:54 AM IST

Earthquake of magnitude 3.2 on the Richter scale occurred at Vijayapura

ವಿಜಯಪುರ ಜಿಲ್ಲೆಯಲ್ಲಿ ಮತ್ತೊಮ್ಮೆ ಭೂಕಂಪನವಾಗಿದೆ. ಗುರುವಾರ ಸಂಜೆ 6.21ರ ಸುಮಾರಿಗೆ ಭೂಮಿ ಕಂಪಿಸಿದೆ.

ವಿಜಯಪುರ: ಜಿಲ್ಲೆಯಲ್ಲಿ ಮತ್ತೊಮ್ಮೆ ಭೂಕಂಪನವಾಗಿದೆ. ಒಂದು ತಿಂಗಳಲ್ಲಿ 7ನೇ ಬಾರಿ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ್ದು, ಜನರು ಮತ್ತೆ ಆತಂಕಗೊಂಡಿದ್ದಾರೆ.

ಬಸವನಬಾಗೇವಾಡಿಯ ಮಗೂಳಿಯಲ್ಲಿ ಗುರುವಾರ ಸಂಜೆ 6.21ರ ಸುಮಾರಿಗೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆಯ ಕಂಪನ ದಾಖಲಾಗಿದೆ. ಈ ಬಗ್ಗೆ ರಾಷ್ಟ್ರೀಯ ಭೂಕಂಪ ಕೇಂದ್ರ (ಎನ್‌ಸಿಎಸ್‌) ದೃಢಪಡಿಸಿದೆ.

  • Earthquake of magnitude 3.2 on the Richter scale occurred at Vijayapura, Karnataka at 1821 hours today: National Center for Seismology

    — ANI (@ANI) October 14, 2021 " class="align-text-top noRightClick twitterSection" data=" ">

ಜಿಲ್ಲೆಯಲ್ಲಿ ಪದೇ ಪದೇ ಭೂಮಿ ಕಂಪಿಸುತ್ತಿರುವುದರಿಂದ ಜನರು ಆತಂಕಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಭೂಕಂಪನ ತಜ್ಞರು ವಿಜಯಪುರಕ್ಕೆ ಭೇಟಿ ನೀಡಲಿದ್ದಾರೆ.

ಸೆಪ್ಟೆಂಬರ್ 4ರ ಬಳಿಕ ಜಿಲ್ಲೆಯಲ್ಲಿ ಒಟ್ಟು 7 ಬಾರಿ ಭೂಕಂಪನದ ಅನುಭವವಾಗಿದೆ. ಕಂಪನದಿಂದ ಇದುವರೆಗೂ ಯಾರಿಗೂ ತೊಂದರೆಯಾಗಿಲ್ಲ. ಮನೆಯ ಕಿಟಕಿ ಗಾಜು ಒಡೆದಿದ್ದು, ಪಾತ್ರೆಗಳು ನೆಲಕ್ಕುರುಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.