ETV Bharat / state

ಆಭರಣದ ಅಂಗಡಿಗೆ ನುಗ್ಗಿ ದರೋಡೆಗೆ ಯತ್ನಿಸಿದ ಐವರ ಬಂಧನ

author img

By

Published : Feb 22, 2023, 10:12 AM IST

arrest
ಬಂಧನ

ಬೈಕ್‌ನಲ್ಲಿ ಬಂದ ಐದು ಜನ ದುಷ್ಕರ್ಮಿಗಳು ಬಂಗಾರದ ಅಂಗಡಿಗೆ ನುಗ್ಗಿ ಗಾಳಿಯಲ್ಲಿ ಗುಂಡು ಹಾರಿಸಿ ಭಯದ ವಾತಾವರಣ ಸೃಷ್ಟಿಸಿದ ಘಟನೆ ಸಿಂದಗಿಯಲ್ಲಿ ನಡೆದಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 5 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ವಿಜಯಪುರ: ಬಂಗಾರದ ಅಂಗಡಿಗೆ ನುಗ್ಗಿ ಗಾಳಿಯಲ್ಲಿ ಗುಂಡು ಹಾರಿಸಿ ದರೋಡೆಗೆ ಯತ್ನಿಸಿದ ಐವರು ಆರೋಪಿಗಳನ್ನು ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ತಡರಾತ್ರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ಹಿನ್ನೆಲೆ: ಫೆ. 13 ರಂದು ರಾತ್ರಿ ಸಿಂದಗಿ ಪಟ್ಟಣದ ಶಾಂತವೀರಮಠದ ಬೀದಿ ಪಕ್ಕದಲ್ಲಿರುವ ಕಾಳು ಪತ್ತಾರ ಎಂಬುವರಿಗೆ ಸೇರಿದ ನ್ಯೂ ಚಾಮುಂಡೇಶ್ವರಿ ಆಭರಣದ ಅಂಗಡಿ ಬಳಿ ಬ್ಲ್ಯಾಕ್ ಪಲ್ಸರ್ ಬೈಕ್​ನಲ್ಲಿ ಬಂದಿದ್ದ ಐವರು ದರೋಡೆಕೋರರು ಜ್ಯುವೆಲ್ಲರ್ಸ್‌​ ಶಾಪ್​ನಲ್ಲಿ ಕಳ್ಳತನಕ್ಕೆ ಯತ್ನಿಸಿದ್ದರು. ಈ ಸಂದರ್ಭದಲ್ಲಿ ಅಂಗಡಿಗೆ ಬಂದಿದ್ದ ಆಲಮೇಲ ಮೂಲದ ವ್ಯಕ್ತಿಯೊಬ್ಬರು ಇವರಿಗೆ ಪ್ರತಿರೋಧ ಒಡ್ಡಿದ್ದಾರೆ. ಈ ವೇಳೆ ಕೂಡಲೇ ಸ್ಥಳೀಯರು ಜಮಾಯಿಸಿದ್ದರಿಂದ ಓರ್ವ ಆರೋಪಿ ಕಂಟ್ರಿ ಪಿಸ್ತೂಲ್ ಹೊರ ತೆಗೆದು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದನು.‌

ಇದನ್ನೂ ಓದಿ: ಚಪ್ಪಲಿ, ಬನಿಯನ್, ಕಾರ್ಟನ್ ಬಾಕ್ಸ್​ನಲ್ಲಿಟ್ಟು ಗೋಲ್ಡ್​ ಸ್ಮಗ್ಲಿಂಗ್.. ಮಂಗಳೂರು ಏರ್​ಪೋರ್ಟ್​ನಲ್ಲಿ ಚಿನ್ನ ವಶಕ್ಕೆ

ತಕ್ಷಣ ಜನ ದುಷ್ಕರ್ಮಿಗಳ ಬಳಿ ಬರುತ್ತಿದ್ದಂತೆ ಖದೀಮರು ಬೈಕ್​ನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಅವರಲ್ಲಿ ಇಬ್ಬರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಇನ್ನೂ ಮೂರು ತಪ್ಪಿಸಿಕೊಂಡಿದ್ದರು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಹಾನಿಯಾಗಿರಲಿಲ್ಲ. ಹಣ ಕೂಡ ಸುರಕ್ಷಿತವಾಗಿದೆ.

arrest
ಆರೋಪಿಗಳಿಂದ ವಶಪಡಿಸಿಕೊಂಡ ಪಿಸ್ತೂಲ್‌ಗಳು ಮತ್ತು ಗುಂಡು

ಇದನ್ನೂ ಓದಿ: ದೇವಸ್ಥಾನದಲ್ಲಿ ಹಣ ಕದಿಯಲು ಮುಂದಾದ ಕಳ್ಳ.. ಗ್ರಾಮಸ್ಥರಿಂದ ಗೂಸಾ

ಈ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ತನಿಖೆ ನಡೆಸಿದ ಪೊಲೀಸರು ಎಸ್ಕೇಪ್​ ಆಗಿದ್ದ ಮೂವರು ಖದೀಮರನ್ನು ಬಂಧಿಸಿದ್ದಾರೆ. ಇನ್ನು ಬಂಧಿತ ಆರೋಪಿಗಳಿಂದ 2 ಕಂಟ್ರಿ ಪಿಸ್ತೂಲ್‌ಗಳು, 8 ಜೀವಂತ ಗುಂಡುಗಳು, ಬೈಕ್ ಸೇರಿದಂತೆ 90 ಸಾವಿರ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಜಾ ಸೌದಾಗಾರ, ಪ್ರದೀಪ ಕಾಳಬುರ, ರಾಹುಲ್ ಬಾಗುಲ, ಮುದಕಪ್ಪ ಕಟ್ಟಿಮನಿ, ಬಜರಂಗಿ ರಾಮರಾವ ಪಾಟೀಲ ಬಂಧಿತರು. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಚಿನ್ನಾಭರಣ ಅಂಗಡಿಗೆ ನುಗ್ಗಿ ಚಾಕುವಿನಿಂದ ಇರಿದು ಸಿಬ್ಬಂದಿ ಹತ್ಯೆ

ಇನ್ನು ಇದೇ ತಿಂಗಳ ಫೆ. 3 ರಂದು ಮಂಗಳೂರು ನಗರದ ಹಂಪನಕಟ್ಟೆಯಲ್ಲಿರುವ ಜ್ಯುವೆಲ್ಲರ್ಸ್‌ ಶಾಪ್​ ನಲ್ಲಿ ಸಹ ಇಂತಹದೇ ಘಟನೆ ನಡೆದಿತ್ತು. ಆಭರಣ ಮಳಿಗೆಯ ಸಿಬ್ಬಂದಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿತ್ತು. ಅತ್ತಾವರ ಮೂಲದ ರಾಘವ ಆಚಾರ್ಯ ಸಾವಿಗೀಡಾಗಿದ್ದರು. ಅಪರಿಚಿತ ವ್ಯಕ್ತಿಯೊಬ್ಬ ಅಂಗಡಿಗೆ ನುಗ್ಗಿ ಕೃತ್ಯ ಎಸಗಿದ್ದ. ಗಂಭೀರವಾಗಿ ಗಾಯಗೊಡ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದರು. ಕೃತ್ಯದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.