ETV Bharat / state

ವಿಜಯಪುರದಲ್ಲಿ ಧಾರಾಕಾರ ಮಳೆ: ಅಪಾರ ಪ್ರಮಾಣದ ಬೆಳೆ ನಾಶ

author img

By

Published : Sep 22, 2020, 1:19 PM IST

ಬೆಳೆಗಳು ಸಂಪೂರ್ಣ ನಾಶ
ಬೆಳೆಗಳು ಸಂಪೂರ್ಣ ನಾಶ

ವಿಜಯಪುರ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಬೆಳೆಗಳು ಸಂಪೂರ್ಣ ನಾಶವಾಗಿವೆ. ಈ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರ ಕಲ್ಪಿಸುವಂತೆ ರೈತರು ಮನವಿ ಮಾಡಿದ್ದಾರೆ.

ವಿಜಯಪುರ: ಕಳೆದೊಂದು ವಾರದಿಂದ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೆಕ್ಕೆಜೋಳ, ಸಜ್ಜೆ ಮುಂತಾದ ಬೆಳೆಗಳು ನೀರಿನಿಂದ ಹಾನಿಯಾಗಿವೆ.

ವಿಜಯಪುರ ತಾಲೂಕಿನ ಕವಲಗಿ, ಕಗ್ಗೋಡ, ಕುಮಟಗಿ ಸುತ್ತಮುತ್ತ ಬೆಳೆ ಹಾನಿಯಾಗಿದೆ. ಅಪಾರ ಪ್ರಮಾಣದ ಮೆಕ್ಕೆಜೋಳ ಬೆಳೆ ಸಂಪೂರ್ಣ ನಾಶವಾಗಿದೆ.

ಸದ್ಯ ಅನ್ನದಾತ ಕಂಗಾಲಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಇನ್ನು ಸೂಕ್ತ ಪರಿಹಾರ ಒದಗಿಸುವಂತೆ ರೈತರು ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.