ETV Bharat / state

ನಾಟಕ ಮಾಡಿದ್ರೆ ಜೈಲು ಕಂಬಿ ಎಣಿಸಬೇಕಾಗುತ್ತದೆ: ಚಕ್ರವರ್ತಿ ಸೂಲಿಬೆಲೆಗೆ ಸಚಿವ ಎಂ.ಬಿ ಪಾಟೀಲ್ ಖಡಕ್​ ವಾರ್ನಿಂಗ್

author img

By

Published : Jun 4, 2023, 5:29 PM IST

Updated : Jun 4, 2023, 6:41 PM IST

ನಾಲ್ಕು ವರ್ಷ ಚಕ್ರವರ್ತಿ ಸೂಲಿಬೆಲೆ ಅನಾಹುತ ಮಾಡಿದ್ದಾರೆ. ಅವರು ಮಾಡಿದ ಅನಾಹುತಗಳನ್ನು ನಾವು ಸರಿಪಡಿಸುತ್ತಿದ್ದೇವೆ ಎಂದು ಸಚಿವ ಎಂ. ಬಿ ಪಾಟೀಲ್ ಹೇಳಿದರು.

m-b-patil-gives-warning-to-chakravarti-sulibele-in-vijayapura
ನಾಟಕ ಮಾಡಿದ್ರೆ ಜೈಲು ಕಂಬಿ ಎಣಿಸಬೇಕಾಗುತ್ತದೆ: ಚಕ್ರವರ್ತಿ ಸೂಲಿಬೆಲೆಗೆ ಸಚಿವ ಎಂ.ಬಿ ಪಾಟೀಲ್ ಖಡಕ್​ ವಾರ್ನಿಂಗ್ !

ಸಚಿವ ಎಂ.ಬಿ ಪಾಟೀಲ್

ವಿಜಯಪುರ: ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಬೃಹತ್​ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ವಾರ್ನಿಂಗ್ ನೀಡಿದ್ದಾರೆ‌. ವಿಜಯಪುರ ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವನ್ನು ಹಿಟ್ಲರ್ ಸರ್ಕಾರಕ್ಕೆ ಹೋಲಿಸಿದ್ದ ಚಕ್ರವರ್ತಿ ಸೂಲಿಬೆಲೆ ಹೇಳಿಕೆ ಪ್ರತಿಕ್ರಿಯಿಸಿದ ಅವರು, ಹಿಂದೆ ನಾಲ್ಕು ವರ್ಷ ಸೂಲಿಬೆಲೆ ಏನ್ ಮಾಡಿದ್ದಾರೆ. ನಾಲ್ಕು ವರ್ಷ ಅನಾಹುತ ಮಾಡಿದ್ದಾರೆ. ಅವರು ಮಾಡಿದ ಅನಾಹುತಗಳನ್ನು ನಾವು ಸರಿಪಡಿಸುತ್ತಿದ್ದೇವೆ ಎಂದರು.

ಅಲ್ಲದೇ, ಪಠ್ಯಪುಸ್ತಕ, ಹಿಜಾಬ್, ಹಲಾಲ್, ಆಜಾನ್ ಅಂತ ಹೇಳಿ ನಾಟಕ ಮಾಡಿದ್ದಾರೆ. ಇನ್ಮುಂದೆ ಇಂಥ ನಾಟಕ ಮಾಡಿದ್ರೆ ಜೈಲು ಕಂಬಿ ಎಣಿಸಬೇಕಾಗುತ್ತದೆ ಎಂದು ಚಕ್ರವರ್ತಿ ಸೂಲಿಬೆಲೆಗೆ ಎಚ್ಚರಿಕೆ ಕೊಟ್ಟಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ರೈತರಿಗೆ ಅನಕೂಲವಾಗುವಂತೆ ಮಾರ್ಪಾಡು ಮಾಡುವ ಬಗ್ಗೆ ಪಶುಸಂಗೋಪನಾ‌ ಇಲಾಖೆ ಸಚಿವ ವೆಂಕಟೇಶ್ ಹೇಳಿಕೆಗೆ ಪ್ರತಿಕ್ರಿಯಿಸಿ, ಇದು ಸೂಕ್ಷ್ಮ ವಿಚಾರ. ಇದನ್ನು‌ ನಮ್ಮ ಪಕ್ಷ ಹಾಗೂ ವರಿಷ್ಠರು ನಿರ್ಧಾರ ಮಾಡುತ್ತಾರೆ. ನಾನು ವೈಯುಕ್ತಿಕವಾಗಿ ಹೇಳಿಕೆ ನೀಡಲ್ಲ ಎಂದರು.

ಸಚಿವರಾಗಿ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಎಂ.ಬಿ ಪಾಟೀಲ್​ಗೆ ಅದ್ಧೂರಿ ಸ್ವಾಗತ: ಸಚಿವರಾದ ಬಳಿಕ ಮೊದಲ ಬಾರಿಗೆ ಶನಿವಾರ ತವರು ಜಿಲ್ಲೆ ವಿಜಯಪುರಕ್ಕೆ ಆಗಮಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರಿಗೆ ವಿಜಯಪುರ ನಗರದಲ್ಲಿ ಭರ್ಜರಿ ಸ್ವಾಗತ ನೀಡಲಾಯಿತು. ನಗರದ ಗುರುಪಾದೇಶ್ವರ ನಗರದಲ್ಲಿರುವ ತೋಂಟದಾರ್ಯ ಶಾಖಾ ಮಠಕ್ಕೆ ಭೇಟಿ ನೀಡಿದ ಅವರು, ಗದಗ-ಡಂಬಳ-ಯಡಿಯೂರು ಮಠದ ಜಗದ್ಗುರುಗಳಾದ ಡಾ. ಸಿದ್ದರಾಮ ಮಹಾಸ್ವಾಮಿಗಳು ಮತ್ತು ವಿಜಯಪುರ ಷಣ್ಮುಖಾರೂಡ ಮಠದ ಶ್ರೀ ಅಭಿನವ ಸಿದ್ದಾರೂಢ ಮಹಾಸ್ವಾಮಿಜಿ ಅವರನ್ನು ಗೌರವಿಸಿ ಆಶೀರ್ವಾದ ಪಡೆದರು.

ಬಳಿಕ ನಗರದ ಶಿವಾಜಿ ಚೌಕ್​ಗೆ ಆಗಮಿಸಿದ ಸಚಿವ ಎಂ. ಬಿ. ಪಾಟೀಲ್​ ಅವರನ್ನು ಅಲಂಕೃತ ತೆರದ ವಾಹನದಲ್ಲಿ ರೋಡ್​ ಶೋ ಮೂಲಕ ಗಾಂಧಿಚೌಕ್​ ಮಾರ್ಗವಾಗಿ ಶ್ರೀ ಸಿದ್ಧೇಶ್ವರ ದೇವಸ್ಥಾನಕ್ಕೆ ಕರೆ ತರಲಾಯಿತು. ಈ ವೇಳೆ ಹಿತೈಷಿಗಳು, ಅಭಿಮಾನಿಗಳು, ಬೆಂಬಲಿಗರು ಮತ್ತು ಕಾರ್ಯಕರ್ತರಿಗೆ ಕೈಮುಗಿದು ಧನ್ಯವಾದ ಸಲ್ಲಿಸಿದರು. ಮೆರವಣಿಗೆ ಮಾರ್ಗದುದ್ದಕ್ಕೂ ಸಚಿವರನ್ನು ಸ್ವಾಗತಿಸಲು ಅಳವಡಿಸಲಾಗಿದ್ದ ಸ್ವಾಗತ ಕಮಾನುಗಳು, ಫ್ಲೆಕ್ಸಗಳು ಗಮನ ಸೆಳೆದವು. ಡಿ.ಜೆ, ಲೇಸರ್ ಲೈಟ್, ಡೊಳ್ಳು ಕುಣಿತ, ಕರಡಿ ಮಜಲು ಸೇರಿದಂತೆ ನಾನಾ ಸಂಗೀತ ವಾದ್ಯಮೇಳಗಳು, ಜನಪದ ಕಲಾ ಗೊಂಬೆಗಳು ಪಾಲ್ಗೊಂಡು ನೂತನ ಸಚಿವರಿಗೆ ಅದ್ದೂರಿ ಸ್ವಾಗತ ಕೋರಿದವು.

ಶ್ರೀ ಸಿದ್ಧೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಎಂ. ಬಿ. ಪಾಟೀಲ್​ ಅವರು ಶ್ರೀ ಸಿದ್ಧರಾಮೇಶ್ವರನಿಗೆ ನಮನ ಸಲ್ಲಿಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಶಾಸಕರಾದ ವಿಠ್ಠಲ ಧೋಂಡಿಬಾ ಕಟಕದೊಂಡ, ಅಶೋಕ ಮನಗೂಳಿ, ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಬೆಂಬಲಿಗರು ಉಪಸ್ಥಿತರಿದ್ದರು. ನಂತರ ಮಾಧ್ಯಮದೊಂದಿಗೆ ಅವರು ಮಾತನಾಡಿದರು.

ರಾಜ್ಯದಲ್ಲಿ ಬಹುಮತದ ಕಾಂಗ್ರೆಸ್ ಸರ್ಕಾರ ಅಧಿಕಾರದ ಗದ್ದುಗೆ ಹಿಡಿದಿದೆ. ಮತದಾರರು ಸುಭದ್ರ ಸರ್ಕಾರ ನೀಡಿದ್ದಾರೆ ಬಹಳಷ್ಟು ಜನರು ಅತಂತ್ರ ನಿರ್ಮಾಣ ಆಗುತ್ತದೆ ಎಂದಿದ್ದರು. ಅವರ ನಿರೀಕ್ಷೆಯನ್ನು ರಾಜ್ಯದ ಮತದಾರರು ಹುಸಿಗೊಳಿಸಿ ಕಾಂಗ್ರೆಸ್​ಗೆ ಬಹುಮತ ನೀಡಿದ್ದಾರೆ. ನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಶಾಸಕರಾಗಬೇಕಿತ್ತು ಆದರೆ ಆಗಲಿಲ್ಲಾ, ನಾವು ನಮ್ಮ ಪಕ್ಷದ ವರಿಷ್ಠರು ಅವರ ಕೈಬಿಡಲಿಲ್ಲಾ ಎಂದರು.

ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್​ ನೇತೃತ್ವದಲ್ಲಿ ಜನತೆ ಅಧಿಕಾರ ನೀಡಿದ್ದಾರೆ
ಜನತೆಗೆ ಐದು ಗ್ಯಾರಂಟಿಗಳನ್ನು ಅನುಷ್ಟಾನ ಮಾಡಿದ್ದೇವೆ. ನಾವು ನುಡಿದಂತೆ ನಡೆದಿದ್ದೇವೆ, ನಾನು ನೀರಾವರಿ ಸಚಿವನಾಗಿದ್ದಾಗ ಹಲವಾರು ನೀರಾವರಿ ಕೆಲಸ ಕಾಮಗಾರಿ ಯೋಜನೆ ಮಾಡಿದ್ದೇನೆ. ನಮ್ಮ ಸರ್ಕಾರ ಉಳಿದ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವೆ ಎಂದು ಹೇಳಿದರು.

ನಾನು ಬಯಸಿ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಸಚಿವನಾಗಿದ್ದೇನೆ, ಇಲ್ಲಿನ ಜನರಿಗೆ ಉದ್ಯೋಗ ನೀಡಬೇಕಿದೆ. ಬೆಂಗಳೂರು ಹೊರತುಪಡಿಸಿ ಇತರೆ ಭಾಗ ಹಾಗೂ‌ ವಿಜಯಪುರ ಜಿಲ್ಲೆಗೆ ಕೈಗಾರಿಕೆಗಳನ್ನು ತರುತ್ತೇನೆ. ರಾಜ್ಯದ ಸಮಗ್ರ ಅಭಿವೃದ್ಧಿ ಮಾಡುತ್ತೇವೆ, ದೇಶದಲ್ಲೇ ರಾಜ್ಯ ನಂಬರ್ ಒನ್ ಮಾಡುತ್ತೇವೆ, ವಿಶ್ವದಲ್ಲೇ ರಾಜ್ಯದ ಹೆಸರು ಮಾಡುತ್ತೆ ಎಂದ ಎಂಬಿ ಪಾಟೀಲ್, ಕೋಮು‌ ಭಾವನೆ ಬಿತ್ತೋ‌ ಕೆಲಸ ನಾಲ್ಕು ವರ್ಷದಲ್ಲಿ ಆಗಿದೆ ಎಂದು ಬಿಜೆಪಿ ವಿರುದ್ಧ ‌ಹರಿಹಾಯ್ದರು. ಎಲ್ಲರೂ‌ ಸಹೋದರತೆಯಿಂದ ಬದುಕಬೇಕಿದೆ. ಜನರ ಬದುಕು ಕಟ್ಟುವ ಕೆಲಸ ಆಗಬೇಕು. ಜನರ ಭಾವನೆ ಕೆರಳಿಸೋ‌ ಕೆಲಸ ಆಗಬಾರದು ಎಂದರು.

ಇದನ್ನೂ ಓದಿ:ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ನಾಳೆ ಬಿಜೆಪಿ ಪ್ರತಿಭಟನೆ: ಎನ್ ರವಿಕುಮಾರ್

Last Updated : Jun 4, 2023, 6:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.