ಕ್ರಿಕೆಟರ್​ ರಾಜೇಶ್ವರಿ ಗಾಯಕ್ವಾಡ್ ವಿರುದ್ಧ ದೂರು​ ದಾಖಲಾಗಿಲ್ಲ: ಆನಂದಕುಮಾರ್

author img

By

Published : Dec 1, 2022, 2:46 PM IST

Vijayapura SP HD Ananda kumar

ಕ್ರಿಕೆಟರ್​ ರಾಜೇಶ್ವರಿ ಗಾಯಕ್ವಾಡ್ ಅವರು ಮಾಲ್ ಸಿಬ್ಬಂದಿ ಜೊತೆ ಜಗಳ ಮಾಡಿಕೊಂಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ದೂರು, ಪ್ರತಿದೂರು ದಾಖಲಾಗಿಲ್ಲ ಎಂದು ವಿಜಯಪುರ ಎಸ್​ಪಿ‌ ಹೆಚ್ ಡಿ ಆನಂದಕುಮಾರ್ ಸ್ಪಷ್ಟಪಡಿಸಿದ್ದಾರೆ.

ವಿಜಯಪುರ: ಭಾರತ ತಂಡದ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ​​ ರಾಜೇಶ್ವರಿ ಗಾಯಕ್ವಾಡ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಎಸ್​ಪಿ‌ ಹೆಚ್ ಡಿ ಆನಂದಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕ್ರಿಕೆಟರ್​ ರಾಜೇಶ್ವರಿ ಗಾಯಕ್ವಾಡ್ ಅವರು‌‌ ಒಂದು ಮಾಲ್​ನಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ ಎಂಬ ವಿಚಾರ ಗಮನಕ್ಕೆ ಬಂದಿದೆ. ಆದರೆ, ಘಟನೆಗೆ ಸಂಬಂಧಿಸಿದಂತೆ ಯಾವುದೇ ಕೇಸ್​ ದಾಖಲಾಗಿಲ್ಲ. ಈ ರೀತಿಯ ಸಣ್ಣ ಪುಟ್ಟ ಘಟನೆಗಳು ನಡೆಯುತ್ತಿರುತ್ತವೆ. ಆದರೆ, ಇವರು ರಾಷ್ಟ್ರೀಯ ಆಟಗಾರರು ಎಂಬ ಕಾರಣಕ್ಕೆ ಸ್ವಲ್ಪ ಸುದ್ದಿಯಾಗಿದೆ. ಗಲಾಟೆಗೆ ಸಂಬಂಧಿಸಿದಂತೆ ದೂರು ದಾಖಲಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಗಾಯಕ್ವಾಡ್ ಗಲಾಟೆ ಕುರಿತು ಪ್ರತಿಕ್ರಿಯೆ ನೀಡಿದ ಎಸ್​ಪಿ‌ ಹೆಚ್ ಡಿ ಆನಂದಕುಮಾರ್

ಇದನ್ನೂ ಓದಿ: ಕನ್ನಡತಿ, ಕ್ರಿಕೆಟರ್​ ರಾಜೇಶ್ವರಿ ಗಾಯಕ್ವಾಡ್​ಗೆ ಗೌರವ ಡಾಕ್ಟರೇಟ್ ಪ್ರದಾನ

ಏನಿದು ಘಟನೆ?: ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ಕ್ರೀಡಾಪಟು ರಾಜೇಶ್ವರಿ ಗಾಯಕ್ವಾಡ್ ಅವರು ಸ್ನೇಹಿತೆಯೊಂದಿಗೆ ವಿಜಯಪುರದ ಶಾಪಿಂಗ್ ಮಾಲ್​ನಲ್ಲಿ ಗಲಾಟೆ ಮಾಡಿದ್ದಾರೆ ಎಂದು ಸೂಪರ್ ಮಾರ್ಕೆಟ್ ಮಾಲೀಕ ಮಲ್ಲಿಕಾರ್ಜುನ್ ಆರೋಪ ಮಾಡಿದ್ದಾರೆ. ಸ್ಟೇಷನರಿ ಐಟಂ ಖರೀದಿಗೆ ಹೋಗಿದ್ದ ವೇಳೆ ಅಂಗಡಿಯವರೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಗಾಯಕ್ವಾಡ್, ಉಮದಿ ಸೂಪರ್ ಮಾರ್ಕೆಟ್​ಗೆ ಹೋಗಿದ್ದು ನಿಜ, ಆದರೆ ಯಾವುದೇ ರೀತಿಯ ಗಲಾಟೆ ನಡೆದಿಲ್ಲ‌ ಎಂದು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.