ವಿಜಯಪುರ: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ವೇಶ್ಯಾವಾಟಿಕೆಯಲ್ಲಿ ಸಿಲುಕಿದ್ದ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ. ದಾಳಿ ನಡೆದ ಸಂದರ್ಭದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ ಪರಾರಿಯಾಗಿದ್ದಾಳೆ. ಘಟನೆಯಲ್ಲಿ ನಾಲ್ವರು ಪುರುಷರನ್ನು ಬಂಧಿಸಲಾಗಿದೆ.
ಸಾಯಿ ಪಾರ್ಕ್ ಬಾಡಿಗೆ ಮನೆಯಲ್ಲಿ ಈ ದಂಧೆ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಪೂಜಾ ಪಾಟೀಲ ಎಂಬಾಕೆ ಪರಾರಿ ಆಗಿದ್ದಾಳೆ.
30-32ವರ್ಷದ ನೊಂದ ಮಹಿಳೆಯರನ್ನು ರಕ್ಷಿಸಲಾಗಿದೆ. ಇವರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಈ ಮಾಂಸ ದಂಧೆಗೆ ತಳ್ಳಲಾಗಿತ್ತು ಎನ್ನಲಾಗ್ತಿದೆ. ಅವರಿಗೆ ದಿನಕ್ಕೆ 200-300 ನೀಡಿ ಉಳಿದ ಹಣವನ್ನು ದಂಧೆ ನಡೆಸುವಾಕೆ ಇಟ್ಟುಕೊಳ್ಳುತ್ತಿದ್ದಳು ಎಂದು ಹೇಳಲಾಗ್ತಿದೆ.
ಎಸ್ಪಿ ಆನಂದ ಕುಮಾರ್ ಮಾರ್ಗದರ್ಶನದಲ್ಲಿ ಎಎಸ್ ಪಿ ಡಾ. ರಾಮ ಅರಸಿದ್ದಿ ನೇತ್ವತೃದಲ್ಲಿ ಜಲನಗರ ಪೊಲೀಸರು ದಾಳಿ ನಡೆಸಿದ್ದಾರೆ.