ETV Bharat / state

ವಿಜಯಪುರ: 8 ಕೋಟಿ ರೂ. ವೆಚ್ಚದ ಕಾಮಗಾರಿಗಳು ಕಳಪೆ- ಕರವೇ ಆರೋಪ

author img

By

Published : Aug 23, 2020, 8:33 PM IST

Appeal letter to Dc
Appeal letter to Dc

8 ಕೋಟಿ ರೂ. ವೆಚ್ಚದಲ್ಲಿ ನಡೆದಿರುವ ರಸ್ತೆ ಕಾಮಗಾರಿ ಹಾಗೂ ಚರಂಡಿ ಕಾಮಗಾರಿ ಕಳಪೆ ಮಟ್ಟದಿಂದ ಕೂಡಿದ್ದು, ಕೂಡಲೇ ಈ ಕಾಮಗಾರಿಗಳಿಗೆ ಸಂಬಂಧಿಸಿದ ಬಿಲ್‌ ಅನ್ನು ತಡೆಹಿಡಿದು ಸೂಕ್ತ ತಪಾಸಣೆ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಮುದ್ದೇಬಿಹಾಳ: ಮತಕ್ಷೇತ್ರದ ತಾಳಿಕೋಟಿ ಪಟ್ಟಣದ ಹಾಗು ವಿವಿಧ ವಾರ್ಡ್ ಗಳಲ್ಲಿ 8 ಕೋಟಿ ರೂ. ವೆಚ್ಚದಲ್ಲಿ ನಡೆದಿರುವ ರಸ್ತೆ ಕಾಮಗಾರಿ ಹಾಗೂ ಚರಂಡಿ ಕಾಮಗಾರಿ ಕಳಪೆ ಮಟ್ಟದಿಂದ ಕೂಡಿದ್ದು, ಕೂಡಲೇ ಈ ಕಾಮಗಾರಿಗಳಿಗೆ ಸಂಬಂಧಿಸಿದ ಬಿಲ್‌ ಅನ್ನು ತಡೆಹಿಡಿದು ಸೂಕ್ತ ತಪಾಸಣೆ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಪಟ್ಟಣದ ಸಮಗ್ರ ಅಭಿವೃದ್ಧಿ ದೃಷ್ಠಿಕೋನದಿಂದ ಸುಮಾರು 8 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಅದರಲ್ಲಿ ಎಸ್.ಎಫ್.ಸಿ. ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳು ಅತ್ಯಂತ ಅವೈಜ್ಞಾನಿಕವಾಗಿ, ಕಳಪೆಮಟ್ಟದಿಂದ ಕೂಡಿದೆ. ಈ ವಿಷಯದ ಕುರಿತು ಪುರಸಭೆಯ ನೂತನ ಸದಸ್ಯರುಗಳು ಪ್ರತಿಭಟಿಸಿ ಕಳಪೆ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಂಬಂಧಿಸಿದ ಮೇಲಾಧಿಕಾರಿಗಳಿಗೆ ತಿಳಿಸಿದ್ದರೂ ಕೂಡಾ ಗುತ್ತಿಗೆದಾರರು ಮಾಡುತ್ತಿರುವ ಕೆಲಸವನ್ನು ಮೇಲಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ಅಲ್ಲದೇ ಅವರ ಮೇಲೆ ಯಾವುದೇ ರೀತಿಯ ಕ್ರಮ ಜರುಗಿಸಿಲ್ಲ.

ಇದರಿಂದ ಅಧಿಕಾರಿಗಳ ನಡೆಯ ಮೇಲೆ ಸಂಶಯ ಹುಟ್ಟಿಕೊಂಡಿದೆ. ಈಗಾಗಲೇ ಈ ಕಾಮಗಾರಿಯ ಕುರಿತು ಪತ್ರಿಕಾ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ (ಕಳಪೆ ಕಾಮಗಾರಿಗಳೆಂದು) ಸುದ್ದಿ ಹರಿದಾಡುತ್ತಿದ್ದರೂ ಗುತ್ತಿಗೆದಾರರು ಎಚ್ಚೆತ್ತುಕೊಳ್ಳದೆ ಕಳಪೆ ಕಾಮಗಾರಿಯನ್ನು ಹಾಗೆಯೇ ಮುಂದುವರೆಸಿದ್ದಾರೆ ಎಂದು ದೂರಿದ್ದಾರೆ. ಕೂಡಲೇ ಜಿಲ್ಲಾಧಿಕಾರಿಗಳು ಕಾಮಗಾರಿಯನ್ನು ವೀಕ್ಷಣೆ ಮಾಡಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಹಾಗೂ ಗುತ್ತಿಗೆದಾರನ ಮೇಲೆ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ವೇಳೆ ಕರವೇ ಸಂಘಟನೆಯ ತಾಲೂಕು ಅಧ್ಯಕ್ಷ ನಿಸಾರ ಬೇಪಾರಿ, ಉಪಾಧ್ಯಕ್ಷ ಜೈಭೀಮ ಮುತ್ತಗಿ, ಅಬುಬಕರ ಲಾಹೋರಿ, ನಭಿ ಲಾಹೋರಿ, ಮುತ್ತು ಧೂಳೆಕರ, ಅನೀಲ ಗೊಟಗುಣಕಿ, ಜಬ್ಬರ ಹವಾಲ್ದಾರ, ಅಲ್ತಾಪ ಬಿಜಾಪೂರ, ಸುಭಾಸ ಮಡಿವಾಳರ, ಶರಣು ಅಗಸರ,ಲಾಲಬಾಷಾ ಗುಂಡಲಗೇರಿ, ಮೊದಲಾದವರು ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.