ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ.. ಇಬ್ಬರು ಯುವಕರು ಸ್ಥಳದಲ್ಲೇ ಸಾವು

author img

By

Published : Sep 21, 2022, 1:05 PM IST

Updated : Sep 21, 2022, 1:37 PM IST

terrible road accident in Vijayapura

ಪಡಗಾನೂರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.

ವಿಜಯಪುರ: ಬೈಕ್​ಗೆ ಕಾರು ಡಿಕ್ಕಿಯಾದ ಪರಿಣಾಮ ಬೈಕ್​ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಕ್ರಾಸ್ ಬಳಿ ನಡೆದಿದೆ.‌

ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಈ ಘಟನೆ ನಡೆದಿದೆ. ಪಡಗಾನೂರು ತಾಂಡಾದ ಬಾಬು ಚೌವ್ಹಾಣ್​ ಮತ್ತು ಅಶೋಕ ನಾಯಕ್ ಮೃತ ಯುವಕರಾಗಿದ್ದಾರೆ. ಘಟನೆ ಬಳಿಕ ಕಾರನ್ನು ಸ್ಥಳದಲ್ಲಿಯೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.‌ ಸ್ಥಳದಲ್ಲಿ ‌ಮೃತ ಯುವಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಭೀಕರ ರಸ್ತೆ ಅಪಘಾತದ ಸ್ಥಳ

ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಬೋಟ್ ರಕ್ಷಣೆಗೆ ಮೀನುಗಳನ್ನು ಸಮುದ್ರಕ್ಕೆ ಎಸೆದ ಮೀನುಗಾರರು: ಗಬ್ಬುನಾರುತ್ತಿರುವ ಕಡಲತೀರ

Last Updated :Sep 21, 2022, 1:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.