ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ: ವಿಜಯಪುರದಲ್ಲಿ ಮೂವರ ದುರ್ಮರಣ

author img

By

Published : Sep 18, 2022, 10:00 AM IST

three-killed-in-road-accident-in-vijayapura

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಅಸುನೀಗಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ಸಂಭವಿಸಿದೆ.

ವಿಜಯಪುರ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ‌ ಸಾರವಾಡ ಗ್ರಾಮದ ಬಳಿ ಶನಿವಾರ ತಡರಾತ್ರಿ ಸಂಭವಿಸಿದೆ. ಜಗ್ಗು ಲಕಡಿ (23), ಸಂತೋಷ ಬಿರಾದಾರ (23) ಹಾಗೂ ಈಶ್ವರ ಸಿಂಧೆ (24) ಮೃತಪಟ್ಟವರು ಎಂದು ತಿಳಿದುಬಂದಿದೆ.

ರಾತ್ರಿ ಊಟ ಮುಗಿಸಿಕೊಂಡು ಒಂದೇ ಬೈಕ್‌ನಲ್ಲಿ ಮೂವರು ಊರಿನತ್ತ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ.‌ ಅಪಘಾತದ ಬಳಿಕ ಅಪರಿಚಿತ ವಾಹನ ಚಾಲಕ ವಾಹನದ ಸಮೇತ ಪರಾರಿಯಾಗಿದ್ದಾನೆ.‌ ಬಬಲೇಶ್ವರ ಪೊಲೀಸ್​​ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ನದಿಗೆ ಬಿದ್ದ ಬಸ್​: ಆರು ಮಹಿಳೆಯರು ಸೇರಿ ಏಳು ಜನರ ದಾರುಣ ಸಾವು, 47 ಮಂದಿಗೆ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.