ಕರ್ತವ್ಯಲೋಪ : ವಿಜಯಪುರದಲ್ಲಿ ಮೂವರು ಶಿಕ್ಷಕರ ಅಮಾನತು

author img

By

Published : Oct 18, 2021, 10:27 PM IST

three teacher suspended due to omission of duty

ಅಮಾನತುಗೊಂಡ ನೌಕರರು ಈ ಅವಧಿಯಲ್ಲಿ ಮೇಲಾಧಿಕಾರಿಗಳ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲ ಎಂದು ಆದೇಶವಿದ್ದರೂ ಈ ನಿಯಮ ಉಲ್ಲಂಘಿಸಿದ್ದರು. ಈ ಆದೇಶವು ತಕ್ಷಣದಿಂದ ಜಾರಿಗೆ ಬಂದಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ನೌಕರರನ್ನು ಕರ್ತವ್ಯದಿಂದ ಇಂದೇ ಬಿಡುಗಡೆ ಮಾಡಿ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ..

ವಿಜಯಪುರ : ಜಿಲ್ಲೆಯ ಸಿಂದಗಿ ವಿಧಾನಸಭೆ ಉಪಚುನಾವಣೆಗೆ ಸಂಬಂಧಪಟ್ಟಂತೆ ಚುನಾವಣಾ ಕಾರ್ಯಕ್ಕೆ ನೇಮಿಸಿದ ಮೂವರು ಅಧಿಕಾರಿಗಳು ಕರ್ತವ್ಯ ಲೋಪವೆಸಗಿದ ಹಿನ್ನೆಲೆ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಪಿ.ಸುನಿಲ್‌ಕುಮಾರ್ ಆದೇಶ ಹೊರಡಿಸಿದ್ದಾರೆ.

ಸಿಂದಗಿಯ ವಿದ್ಯಾನಗರದ ಪ್ರಾಥಮಿಕ ಶಾಲೆಯ ಶಿಕ್ಷಕರಾದ ವಿ ವಿ ನಿಂಬರ್ಗಿ, ಎಸ್‌ ಆರ್‌ ಸಿಂದಗಿ ಹಾಗೂ ಆರ್ ಎ ಕಠಾರೆ ಇವರನ್ನು ಅಮಾನತುಗೊಳಿಸಲಾಗಿದೆ. ಇವರ ವಿರುದ್ಧ ಇಲಾಖಾ ವಿಚಾರಣೆ ಬಾಕಿ ಇರಿಸಿ, ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ.

three teacher suspended due to omission of duty
ಮೂವರು ಶಿಕ್ಷಕರು ಅಮಾನತು

ಅಮಾನತುಗೊಂಡ ನೌಕರರು ಈ ಅವಧಿಯಲ್ಲಿ ಮೇಲಾಧಿಕಾರಿಗಳ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲ ಎಂದು ಆದೇಶವಿದ್ದರೂ ಈ ನಿಯಮ ಉಲ್ಲಂಘಿಸಿದ್ದರು. ಈ ಆದೇಶವು ತಕ್ಷಣದಿಂದ ಜಾರಿಗೆ ಬಂದಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ನೌಕರರನ್ನು ಕರ್ತವ್ಯದಿಂದ ಇಂದೇ ಬಿಡುಗಡೆ ಮಾಡಿ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.