ETV Bharat / state

ಆಲಮಟ್ಟಿ ಡ್ಯಾಂ ಬಳಿ ಬುರ್ಖಾ ಧರಿಸಿ ಬಂದಿದ್ದ ವ್ಯಕ್ತಿ.. ಪೊದೆ ಹಿಂದೆ ಬಟ್ಟೆ ತೆಗೆದಿದ್ದನ್ನು ಕಂಡು ಖಾಕಿ ಶಾಕ್!​

author img

By

Published : Jul 25, 2022, 3:39 PM IST

ಬುರ್ಖಾ ಧರಿಸಿ ಆಲಮಟ್ಟಿ ಡ್ಯಾಂ ಆವರಣದಲ್ಲಿ ಸುತ್ತಾಡುತ್ತಿದ್ದ ತೃತೀಯ ಲಿಂಗಿ- ಪೊಲೀಸರಿಂದ ವಿಚಾರಣೆ- ಮದುವೆಗೆ ಒತ್ತಾಯಿಸಿದ್ದಕ್ಕೆ ಮನೆ ಬಿಟ್ಟು ಬಂದಿರುವುದಾಗಿ ಹೇಳಿಕೆ

ತೃತೀಯ ಲಿಂಗಿ
ತೃತೀಯ ಲಿಂಗಿ

ವಿಜಯಪುರ: ಆಲಮಟ್ಟಿ ಜಲಾಶಯದ ಆವರಣದಲ್ಲಿ ಅನುಮಾನಾಸ್ಪದವಾಗಿ ಸುತ್ತಾಡುತ್ತಿದ್ದ ಬುರ್ಖಾಧಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಡ್ಯಾಂ ಪ್ರವೇಶ ದ್ವಾರದಲ್ಲಿ ಇಂದು ಬೆಳಗ್ಗೆ ನಸುಕಿನ ಜಾವದಲ್ಲೇ ಬುರ್ಖಾ ಧರಿಸಿ ಡ್ಯಾಂ ಆವರಣಕ್ಕೆ ಹೋಗುತ್ತಿದ್ದವನು ಡ್ಯಾಂ ಒಳಗೆ ನುಗ್ಗಲು ಪ್ರಯತ್ನಿಸಿದ್ದ.‌ ಈ ವೇಳೆ ಡ್ಯಾಂ ಒಳಗೆ ಪ್ರವೇಶ ನೀಡಲು ಆಗುವುದಿಲ್ಲ ಎಂದು ಪೊಲೀಸರು ತಿಳಿಸಿದ್ದರು.

ಡ್ಯಾಂ ಸುತ್ತ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ತೃತೀಯ ಲಿಂಗಿಯ ಬಂಧನ

ಈ ವೇಳೆ ಬುರ್ಖಾ ಧರಿಸಿರುವುದು ಮಹಿಳೆಯಲ್ಲ, ಪುರುಷ ಎಂಬುದು ಪೊಲೀಸರಿಗೆ ಸಂಶಯ ವ್ಯಕ್ತವಾಗಿತ್ತು. ಅಲ್ಲದೇ, ಕೆಲ ಸಮಯದ ಬಳಿಕ ಬುರ್ಖಾಧಾರಿ ಮುಳ್ಳು ಕಂಟಿಗಳಾಚೆ ಹೋಗಿ ಬುರ್ಖಾ ತೆಗೆದು ಆಚೆ ಬಂದಿದ್ದ.‌ ಇದಾದ ನಂತರ ಬುರ್ಖಾಧಾರಿ ಮಹಿಳೆಯಲ್ಲ, ಪುರುಷ ಎಂಬುದು ಪೊಲೀಸರಿಗೆ ಗೊತ್ತಾಗಿದೆ. ಬುರ್ಖಾ ಧರಿಸಿ ಬಂದಿದ್ದು ಯುವಕ ಎಂಬುದನ್ನು ಕಂಡುಹಿಡಿದ ಕೂಡಲೇ ಆತನನ್ನು ವಶಕ್ಕೆ ಪಡೆದು ಆಲಮಟ್ಟಿ ಪೊಲೀಸರು ವಿಚಾರಣೆ ನಡೆಸಿದಾಗ ತಾನು ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿ ಎಂದು ಹೇಳಿಕೊಂಡಿದ್ದಾನೆ.

ತನ್ನ ಹೆಸರು ಕಿಶೋರ್ ಮಲ್ಲಿಕಾರ್ಜುನ ಸ್ವಾಮಿ ಎಂದು ಹೇಳಿಕೊಂಡಿದ್ದಾನೆ. ನನ್ನಲ್ಲಿ ಹೆಣ್ತನ ಬೆಳೆಯುತ್ತಿದೆ. ಹೀಗಾಗಿ, ತೃತೀಯ ಲಿಂಗಿಯಾಗಿ ಪರಿವರ್ತನೆ ಹೊಂದುತ್ತಿದ್ದೇನೆ. ನನಗೆ ಮದುವೆ ಬೇಡ ಎಂದರೂ ಮನೆಯಲ್ಲಿ ಒತ್ತಡ ಹೇರುತ್ತಿದ್ದಾರೆ. ಆದ್ದರಿಂದ, ಮನೆ ಬಿಟ್ಟು ಬಂದಿದ್ದಾಗಿ ಕೆಲ ವಿಚಾರ ಹೇಳಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.‌ ಸದ್ಯ ಸಿಬ್ಬಂದಿ ವಿಚಾರಣೆಯನ್ನು ಮುಂದುವರೆಸಿದ್ದಾರೆ. ಆಲಮಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ: ಪಿಎಸ್ಐ ಪರೀಕ್ಷೆ ಅಕ್ರಮ: ಕಲಬುರಗಿ ನಗರ ಪೊಲೀಸ್ ಆಯುಕ್ತರನ್ನು ಪ್ರಶ್ನಿಸಿದ ಸಿಐಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.