ವಿಜಯಪುರ: ಇತ್ತೀಚೆಗಷ್ಟೆ ಫ್ರಾನ್ಸ್ನಿಂದ ಭಾರತ ಬಂದು, ಸೇನೆಗೆ ಸೇರ್ಪಡೆಯಾದ ರಫೇಲ್ ಯುದ್ಧ ವಿಮಾನಕ್ಕೆ ವಿವಿಧ ಸೈನಿಕ ಶಾಲೆಯ ನಾಲ್ವರು ಕಮಾಂಡರ್ಗಳು ಆಯ್ಕೆಯಾಗಿದ್ದಾರೆ. ಅದರಲ್ಲೂ ವಿಜಯಪುರ ಸೈನಿಕ ಶಾಲೆಯಲ್ಲಿ ಕಲಿತಿದ್ದ ವಿದ್ಯಾರ್ಥಿಯೊಬ್ಬರು ಪೈಲಟ್ ಆಗಿ ಆಯ್ಕೆಯಾಗಿದ್ದು, ಕರ್ನಾಟಕ ರಾಜ್ಯಕ್ಕೆ ಹೆಮ್ಮೆ ತಂದಿದೆ.
ಭಾರತೀಯ ವಾಯುಸೇನೆಯಲ್ಲಿ ವಿಂಗ್ ಕಮಾಂಡರ್ ಆಗಿದ್ದ ಅರುಣ್ ಕುಮಾರ ಅವರಿಗೆ ಈ ಅವಕಾಶ ದೊರಕಿದೆ. 35 ವರ್ಷದ ಅರುಣ ಕುಮಾರ ವಿಜಯಪುರದ ಸೈನಿಕ ಶಾಲೆಯ ವಿದ್ಯಾರ್ಥಿಯಾಗಿದ್ದರು ಎಂಬುದು ಹೆಮ್ಮೆಯ ವಿಚಾರ.
![Rafael fighter jet](https://etvbharatimages.akamaized.net/etvbharat/prod-images/kn-vjp-02-raffie-aircraft-perfomance-av-7202140_29072020083107_2907f_1595991667_554.jpg)
ಇವರು 1995 ರಿಂದ 2001ರ ಬ್ಯಾಚ್ ವಿದ್ಯಾರ್ಥಿಯಾಗಿದ್ದರು. ಅರುಣ ಕುಮಾರ ಜನವರಿ 2002ರಲ್ಲಿ ಎನ್ಡಿಎ (ನ್ಯಾಷನಲ್ ಡಿಫೆನ್ಸ್ ಅಕಾಡೆಮಿ) ಗೆ ಸೇರ್ಪಡೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ತಂದೆ ಎನ್ ಪ್ರಸಾದ ಸಹ ಏರ್ಫೋರ್ಸ್ನಲ್ಲಿ ವಾರಂಟ್ ಆಫೀಸರ್ ಆಗಿ ಸೇವೆ ಸಲ್ಲಿಸಿದ್ದಾರೆ.
ಅರುಣ್ ಕುಮಾರ ವಿಜಯಪುರದ ಸೈನಿಕ ಶಾಲೆಯಲ್ಲಿ ಚುರುಕಿನ ವಿದ್ಯಾರ್ಥಿಯಾಗಿದ್ದರು. ಎಲ್ಲರ ಅಚ್ಚುಮೆಚ್ಚಿನ ಸ್ನೇಹಿತರಾಗಿದ್ದ ಇವರು, ಸೈನಿಕ ಶಾಲೆಯ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗೆ ಪ್ರೀತಿಪಾತ್ರರಾಗಿದ್ದರು. ಇವರ ಸಾಧನೆಗೆ ಎಲ್ಲ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.