ETV Bharat / state

ಶಾಸಕ ಯತ್ನಾಳ್ ಅರುಣ್​ ಸಿಂಗ್ ಭೇಟಿ ಬಿಜೆಪಿ ವಲಯದಲ್ಲಿ ಸಂಚಲನ

author img

By

Published : Nov 8, 2022, 10:31 PM IST

Kn_vjp_04_
ಶಾಸಕ ಯತ್ನಾಳ್ ಅರುಣಸಿಂಗ್ ಭೇಟಿ

ಇಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಮತ್ತು ಅರುಣ್ ಸಿಂಗ್ ನಡುವೆ ಸಭೆ ನಡೆದಿದ್ದು ಕುತೂಹಲ ಮೂಡಿಸಿದೆ.

ವಿಜಯಪುರ: ಇಂದು ನಗರದ ಹೊರ ಭಾಗದಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನಡುವೆ ಮಹತ್ವದ ಸಭೆ ನಡೆದಿದೆ.‌

ವಿಜಯಪುರ ನಗರದ ಹೊರ ಭಾಗದಲ್ಲಿರುವ ಹೈಪರ್ ಮಾರ್ಟ್​ನಲ್ಲಿ ಈ ಸಭೆ ನಡೆದಿದೆ.‌ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಮಾಲೀಕತ್ವದ ಹೈಪರ್ ಮಾರ್ಟ್ ಇದಾಗಿದೆ. ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಇಂಡಿ ಹಾಗೂ ಸಿಂದಗಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಂಕಲ್ಪಸಭೆಯಲ್ಲಿ ಭಾಗವಹಿಸಿ ನಂತರ ವಿಜಯಪುರಕ್ಕೆ ಆಗಮಿಸಿ ಯತ್ನಾಳ್​ ಅವರನ್ನು ಭೇಟಿ ಮಾಡಿ ಮಹತ್ವದ ಸಭೆ ನಡೆಸಿದರು.

ಬೆಳಗ್ಗೆಯಿಂದ ಅರುಣ್ ಸಿಂಗ್ ಅವರಿಂದ ಯತ್ನಾಳ್​ ಅಂತರ ಕಾಯ್ದುಕೊಂಡಿದ್ದರು. ಸಂಜೆ ಏಕಾಏಕಿ ಇಬ್ಬರು ನಾಯಕರು ಭೇಟಿಯಾಗಿರುವುದು ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ. ಮೊನ್ನೆಯಷ್ಟೇ ಹುಬ್ಬಳ್ಳಿಯಲ್ಲಿ ಯತ್ನಾಳ್​ ಕೇವಲ ಒಬ್ಬ ಶಾಸಕ ಎಂದು ಅರುಣ್​ ಸಿಂಗ್ ಹೇಳಿಕೆ ನೀಡಿದ್ದ ಬೆನ್ನಲ್ಲೆ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ಇನ್ನು ಬೆಳಗ್ಗೆ ಬಿಜೆಪಿ ಕಾರ್ಯಕ್ರಮದಲ್ಲಿ ಯತ್ನಾಳ್​ ಬಗ್ಗೆ ಪ್ರತಿಕ್ರಿಯೆ ನೀಡಲು ಅರುಣ್ ಸಿಂಗ್ ನಿರಾಕರಿಸಿದ್ದರು.‌ ಇದೀಗ ಏಕಾಏಕಿ ಯತ್ನಾಳ್​ ಅವರ ಮಾಲೀಕತ್ವದ ಮಾರ್ಟ್​ಗೆ ಭೇಟಿ ನೀಡಿ ಅವರ​ ಜೊತೆ ಸಭೆ ಮಾಡಿರುವುದು ಕುತೂಹಲ ಮೂಡಿಸಿದೆ. ಇತ್ತೀಚಿಗೆ ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿರುವ ಬಗ್ಗೆ ಇಂಡಿ ಕಾರ್ಯಕ್ರಮದಲ್ಲಿ ಅರುಣ್​ ಸಿಂಗ್​ ಜಿಲ್ಲಾ ಬಿಜೆಪಿ ಸಾಧನೆ ಬಗ್ಗೆ ಹೊಗಳಿದ್ದರು.

ಇದನ್ನೂ ಓದಿ: ಮಂತ್ರಾಲಯ ಮಠಕ್ಕೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಭೇಟಿ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.