ಕೃಷ್ಣಾ ನದಿಗೆ 2 ಲಕ್ಷ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಯಾದಗಿರಿ ಜಿಲ್ಲೆಯ 40ಕ್ಕೂ ಹೆಚ್ಚು ಹಳ್ಳಿಗಳಲ್ಲಿ  ಪ್ರವಾಹ ಭೀತಿ

author img

By

Published : Jul 23, 2021, 12:43 PM IST

2 lakhs 50 thousand cusecs of water released, 2 lakhs 50 thousand cusecs of water released to Krishna river, Krishna river, Krishna river flood, Krishna river flood news, 2 ಲಕ್ಷ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಕೃಷ್ಣಾ ನದಿಗೆ 2 ಲಕ್ಷ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಕೃಷ್ಣಾ ನದಿ, ಕೃಷ್ಣಾ ನದಿ ಪ್ರವಾಹ, ಕೃಷ್ಣಾ ನದಿ ಪ್ರವಾಹ ಸುದ್ದಿ,

ಕೃಷ್ಣಾ ನದಿಗೆ 2 ಲಕ್ಷ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಯಾದಗಿರಿ ಜಿಲ್ಲೆಯ 40 ಕ್ಕೂ ಹೆಚ್ಚು ಹಳ್ಳಿಗಳಿಗೆ ಪ್ರವಾಹ ಭೀತಿ ಶುರುವಾಗಿದೆ.

ಯಾದಗಿರಿ: ಕೃಷ್ಣಾ ನದಿಗೆ 2 ಲಕ್ಷ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದರಿಂದ ಜಿಲ್ಲೆಯ 40 ಕ್ಕೂ ಹೆಚ್ಚು ಹಳ್ಳಿಗಳಿಗೆ ಪ್ರವಾಹ ಭೀತಿ ಎದುರಾಗಿದೆ. ರಾಯಚೂರು ಮತ್ತು ಯಾದಗಿರಿ ಸಂಪರ್ಕ ಕಲ್ಪಿಸುವ ಕೋಳುರು ಬ್ರಿಡ್ಜ್ ಸಹ ಮುಳುಗಡೆ ಹಂತ ತಲುಪಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

ಜಲಾಶಯದ ಅಧಿಕಾರಿಗಾಳು 12 ಗಂಟೆಯ ವೇಳೆಗೆ 2 ಲಕ್ಷ 50 ಸಾವಿರ ಕ್ಯೂಸೆಕ್ ನೀರು ಬಿಡುವ ಮಾಹಿತಿ ನೀಡಿದ್ದರು. ಹೀಗಾಗಿ ಯಾದಗಿರಿ ಜಿಲ್ಲೆಯ 40ಕ್ಕೂ ಹೆಚ್ಚು ಹಳ್ಳಿಗಳಿಗೆ ಪ್ರವಾಹ ಭೀತಿ ಎದುರಾಗಿದೆ. ಅಷ್ಟೇ ಅಲ್ಲದೆ ನದಿ ಪಕ್ಕದ ಹೊಲದಲ್ಲಿನ ಪಂಪ್ ಸೆಟ್, ಪೈಪ್ ಸೇರಿದಂತೆ ಕೃಷಿ ಉಪಕರಣಗಳನ್ನು ರೈತರು ಸ್ಥಳಾಂತರ ಮಾಡುತ್ತಿದ್ದಾರೆ.

ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ನೋಡಲ್ ಆಫೀಸರ್​ಗಳನ್ನು ನೇಮಕ ಮಾಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.