ಯಾದಗಿರಿ: ಬಂದೂಕಿನಿಂದ ಗುಂಡು ಹಾರಿಸಿ ಕೇಂದ್ರ ಸಚಿವರಿಗೆ ಭರ್ಜರಿ ಸ್ವಾಗತ

author img

By

Published : Aug 18, 2021, 4:18 PM IST

Updated : Aug 18, 2021, 5:25 PM IST

Celebratory gunshots during welcome of BJP Minister Bhagavantha khuba

ಯಾದಗಿರಿ ತಾಲೂಕಿನ ಯರಗೋಳದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ನಾಡ ಬಂದೂಕಿನಿಂದ ಗುಂಡು ಹಾರಿಸಿ ಕಾರ್ಯಕರ್ತರು ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಸ್ವಾಗತ ಕೋರಿರುವ ಘಟನೆ ಬೆಳಕಿಗೆ ಬಂದಿದೆ.

ಯಾದಗಿರಿ: ಕೇಂದ್ರ ಸಚಿವ ಭಗವಂತ ಖೂಬಾ ಅವರ ನೇತೃತ್ವದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ನಾಡ ಬಂದೂಕಿನಿಂದ ಗುಂಡು ಹಾರಿಸಿ ಕಾರ್ಯಕರ್ತರು ಕೇಂದ್ರ ಸಚಿವರಿಗೆ ಸ್ವಾಗತ ಕೋರಿರುವ ಘಟನೆ ಬೆಳಕಿಗೆ ಬಂದಿದೆ.

ಬಂದೂಕಿನಿಂದ ಗುಂಡು ಹಾರಿಸಿ ಕೇಂದ್ರ ಸಚಿವರಿಗೆ ಭರ್ಜರಿ ಸ್ವಾಗತ

ಕಲಬುರಗಿ ಜಿಲ್ಲೆಯಿಂದ ಜನಾಶೀರ್ವಾದ ಯಾತ್ರೆ ಯಾದಗಿರಿಗೆ ತೆರಳಿತ್ತು. ಈ ವೇಳೆ, ಯಾದಗಿರಿ ತಾಲೂಕಿನ ಯರಗೋಳ್ ಬಳಿ ಮೂರು ನಾಡ ಬಂದೂಕುಗಳಿಂದ ಬಿಜೆಪಿ ಕಾರ್ಯಕರ್ತರು ಗಾಳಿಯಲ್ಲಿ ಗುಂಡು ಹಾರಿಸಿ ಕೇಂದ್ರ ಸಚಿವರಿಗೆ ಸ್ವಾಗತ ಕೋರಿದರು.

ತಮ್ಮ ಎದುರೇ ಗುಂಡು ಹಾರಿಸಿದರೂ ಪೊಲೀಸರು ಕೈ ಕಟ್ಟಿ ಕುಳಿತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ವಿಷಯ ಈಗ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೂ ಗ್ರಾಸವಾಗಿದೆ.

ಓದಿ: RSS ನವರು ಭಾರತದ ನಿಜವಾದ ತಾಲಿಬಾನಿಗಳು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ

Last Updated :Aug 18, 2021, 5:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.