ETV Bharat / state

ಸಾರ್ವಜನಿಕರ ಸಮಸ್ಯೆಗಳನ್ನು ಸಕಾಲಕ್ಕೆ ಸ್ಪಂದಿಸಿ ಪರಿಹರಿಸಿ : ಸಚಿವ ದರ್ಶನಾಪೂರ್

author img

By ETV Bharat Karnataka Team

Published : Sep 25, 2023, 11:09 PM IST

ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ್​
ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ್​

ಸಮಾಜದ ಪ್ರತಿ ವ್ಯಕ್ತಿಗೆ ಸರ್ಕಾರದ ಸೌಲಭ್ಯಗಳನ್ನು ದೊರಕಿಸುವ ಹೆಚ್ಚಿನ ಆಸಕ್ತಿಯೊಂದಿಗೆ ಸರ್ಕಾರ ಜನತಾ ದರ್ಶನವನ್ನು ಹಮ್ಮಿಕೊಂಡಿದೆ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ್​ ಹೇಳಿದ್ದಾರೆ.

ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ್​

ಯಾದಗಿರಿ : ರಾಜ್ಯ ಸರ್ಕಾರವು ಮಹತ್ವಾಕಾಂಕ್ಷೆಯೊಂದಿಗೆ ಮುಖ್ಯಮಂತ್ರಿಗಳ ಮುತುವರ್ಜಿಯಿಂದ ರಾಜ್ಯಾದ್ಯಂತ ಈ ಮಹತ್ವದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ಕಾರದ ಸೌಲಭ್ಯಗಳನ್ನು ಕಡುಬಡವರು, ಸಮಾಜದ ಪ್ರತಿ ವ್ಯಕ್ತಿಗೆ ದೊರಕಿಸಲು ಹೆಚ್ಚಿನ ಆಸಕ್ತಿಯೊಂದಿಗೆ ಜನತಾ ದರ್ಶನ ಹಮ್ಮಿಕೊಂಡಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಲ್ಲಿಸಿದಾಗ ಅಧಿಕಾರಿಗಳು ಸಕಾಲಕ್ಕೆ ಸ್ಪಂದಿಸಿ ಪರಿಹರಿಸಿದ್ದಲ್ಲಿ ಸರ್ಕಾರಕ್ಕೆ ಹಾಗೂ ಜನಪ್ರತಿನಿಧಿಗಳಿಗೂ ಒಳ್ಳೆಯ ಹೆಸರು ಬರಲು ಸಾಧ್ಯವೆಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ್ ಹೇಳಿದರು.

ನಗರದ ಡಾ ಬಾಬು ಜಗಜೀವನರಾಂ ಭವನದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ವಿವಿಧ ಯೋಜನೆಗಳಡಿಯ ಸೌಲಭ್ಯ ಹಾಗೂ ನಾಗರಿಕರ ಕುಂದುಕೊರತೆ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ, ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯ ಸರ್ಕಾರ ಇದೇ ಪ್ರಥಮ ಬಾರಿಗೆ ಜನತಾ ದರ್ಶನದಂತಹ ಮಹತ್ವಾಕಾಂಕ್ಷೆ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಿದ್ದು, ಪ್ರತಿ ತಿಂಗಳು 15 ದಿನಗಳಿಗೊಮ್ಮೆ ತಾಲೂಕುವಾರು ಜನತಾ ದರ್ಶನ ಹಮ್ಮಿಕೊಳ್ಳಲಾಗುತ್ತಿದ್ದು, ಇಂದು ಸಲ್ಲಿಕೆಯಾಗಿರುವ ಅರ್ಜಿಗಳಿಗೆ ತಕ್ಷಣ ಅಧಿಕಾರಿಗಳು ಪರಿಹಾರ ನೀಡಬೇಕು ಎಂದು ತಿಳಿಸಿದರು.

ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಮಾತನಾಡಿ, ಜಿಲ್ಲೆಯ ಬಡ ಜನರಿಗೆ ನಗರ ಮತ್ತು ಗ್ರಾಮಾಂತರ ಪ್ರದೇಶದ ವ್ಯಾಪ್ತಿಯಲ್ಲಿ ವಸತಿ ಮತ್ತು ನಿವೇಶನ ಹಾಗೂ ಕುಡಿಯುವ ನೀರು ಸೌಲಭ್ಯ ಕಲ್ಪಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜನತಾ ದರ್ಶನದಲ್ಲಿ ಒಟ್ಟು 245ಕ್ಕೂ ಹೆಚ್ಚು ಅರ್ಜಿಗಳು (ಐಪಿಜಿಆರ್‌ಎಸ್) ನೋಂದಣಿಯಾಗಿವೆ. ಸಚಿವರು ಇಂದು 35 ಅರ್ಜಿಗಳ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ, ಗುರುಮಠಕಲ್ ಶಾಸಕ ಶರಣಗೌಡ ಕಂದುಕೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ. ಜಿಪಂ ಸಿಇಒ ಗರಿಮಾ ಪನ್ವಾರ, ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು : ಮುಖ್ಯಮಂತ್ರಿಯವರ ಆಶಯದಂತೆ, ಸಾರ್ವಜನಿಕರ ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಅವರು ಕರೆ ನೀಡಿದರು.

ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಇಂದು ಏರ್ಪಡಿಸಿದ್ದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಿ ಸ್ಥಳದಲ್ಲಿಯೇ ಪರಿಹಾರ ನೀಡುವ “ಜನತಾ ದರ್ಶನ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇದನ್ನೂ ಓದಿ: ಜೆಡಿಎಸ್ ಬಿಜೆಪಿ ಮೈತ್ರಿಯಿಂದ ಉತ್ತರ ಕರ್ನಾಟಕದಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ: ಬಿ ನಾಗೇಂದ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.