ETV Bharat / state

ಹುತಾತ್ಮ ಯೋಧರಿಗೆ ಪ್ರಗತಿಪರ ಸಂಘಟನೆಗಳಿಂದ ಶ್ರದ್ಧಾಂಜಲಿ

author img

By

Published : Jun 24, 2020, 6:02 PM IST

martyred-soldiers
ಹುತಾತ್ಮ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಿದ ಪ್ರಗತಿಪರ ಸಂಘಟನೆಗಳು

ಸುರಪುರ ನಗರದ ಡಾ. ಬಿ.ಆರ್.ಅಂಬೇಡ್ಕರ್​ ವೃತ್ತದಲ್ಲಿ ಚೀನಾ ದಾಳಿಯಲ್ಲಿ ಹುತಾತ್ಮರಾದ ಎಲ್ಲಾ ಯೋಧರಿಗೆ ಹೂ ಮಾಲೆ ಹಾಕಿ ಎರಡು ನಿಮಿಷಗಳ ಮೌನಾಚರಣೆ ನಡೆಸಿ ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಕೋರಲಾಯಿತು.

ಸುರಪುರ: ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರಗತಿಪರ ಸಾಮೂಹಿಕ ಸಂಘಟನೆಗಳ ವೇದಿಕೆ ವತಿಯಿಂದ ಲಡಾಖ್‌ನ ಗಾಲ್ವಾನ್​ ಕಣಿವೆಯಲ್ಲಿ ಚೀನಾ ಸೈನಿಕರೊಂದಿಗೆ ಕಾದಾಡಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಹುತಾತ್ಮರಾದ ಎಲ್ಲಾ ಯೋಧರಿಗೆ ಹೂ ಮಾಲೆ ಹಾಕಿ ಎರಡು ನಿಮಿಷಗಳ ಕಾಲ ಮೌನಾಚರಣೆ ನಡೆಸಿ ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಕೋರಲಾಯಿತು.

ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

ಈ ಸಂದರ್ಭದಲ್ಲಿ ದೇವಿಂದ್ರಪ್ಪ ಪತ್ತಾರ ಮಾತನಾಡಿ, ಚೀನಾ ಸೇನೆ ಕಾಲು ಕೆರೆದು ಭಾರತೀಯ ಸೇನೆಯೊಂದಿಗೆ ಕಾದಾಟಕ್ಕೆ ಬರುತ್ತಿರುವುದನ್ನು ಖಂಡಿಸುತ್ತೇವೆ. ಅಲ್ಲದೆ ಭಾರತೀಯರಾದ ನಾವು ಸೇನೆಗೆ ಬೆಂಬಲವಾಗಿ ನಿಲ್ಲುವ ಜೊತೆಗೆ ಚೀನಾ ಕೃತ್ಯವನ್ನು ಖಂಡಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಹುಲ್ ಹುಲಿಮನಿ, ದೇವಿಂದ್ರ ಪತ್ತಾರ, ಶಿವಲಿಂಗ ಹಸನಾಪೂರ ಸೇರಿದಂತೆ ಇತರರು ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.