ETV Bharat / state

ಲಾರಿ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿ ಸಾವು: ಚಾಲಕನ ವಿರುದ್ಧ ನಿರ್ಲಕ್ಷ್ಯ ಆರೋಪ

author img

By

Published : May 19, 2022, 12:12 PM IST

student died by accident in Gurumitkal
ಲಾರಿ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿ ಸಾವು

ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ವಿದ್ಯಾರ್ಥಿ ಅಂಜಪ್ಪ ಸಾವನ್ನಪ್ಪಿದ್ದಾನೆ.

ಗುರುಮಠಕಲ್(ಯಾದಗಿರಿ): ಸೇಡಂ ತಾಲೂಕಿನ ಪಾಕಾಲ ಗ್ರಾಮದಲ್ಲಿ ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟಿದ್ದಾನೆ. ಅತಿವೇಗವಾಗಿ ಸಂಚರಿಸುತ್ತಿದ್ದ ಲಾರಿ ಚಾಲಕ ಯಾವುದೇ ಸೂಚನೆ ನಿಡದೇ ಲಾರಿಯನ್ನು ಬಲಕ್ಕೆ ತಿರುಗಿಸಿದ್ದರ ಪರಿಣಾಮವಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ.

ಲಾರಿ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿ ಸಾವು ಪ್ರಕರಣ

ಮೃತ ವಿದ್ಯಾರ್ಥಿ ಅಂಜಪ್ಪ ಮದುವೆ ಸಮಾರಂಭದಲ್ಲಿ ಭಾಗವಹಿಸಲು ರಾಮಸಮುದ್ರಕ್ಕೆ ಬೈಕ್​ನಲ್ಲಿ ತನ್ನಿಬ್ಬರು ಗೆಳೆಯರೊಂದಿಗೆ ತೆರಳುತ್ತಿದ್ದ. ಈ ವೇಳೆ ಅಪಘಾತ ಸಂಭವಿಸಿದ್ದು, ಉಳಿದ ಇಬ್ಬರಿಗೆ ಯಾವುದೇ ಗಾಯಗಳಾಗಿಲ್ಲ. ಅತಿ ವೇಗದಲ್ಲಿ ಚಲಿಸುತ್ತಿದ್ದ ಲಾರಿ ಚಾಲಕನು ಹಿಂದಿನಿಂದ ಬರುತ್ತಿದ್ದ ವಾಹನಗಳಿಗೆ ಯಾವುದೇ ಸೂಚನೆ ನೀಡದೇ ಲಾರಿಯನ್ನು ಬಲಕ್ಕೆ ತಿರುಗಿಸಿದ್ದೇ ಅಪಘಾತಕ್ಕೆ ಕಾರಣವೆಂದು ಆರೋಪಿಸಲಾಗಿದೆ.

student died by accident in Gurumitkal
ಲಾರಿ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿ ಸಾವು

ಇದನ್ನೂ ಓದಿ: ಟೊಮೆಟೊ, ನುಗ್ಗೇಕಾಯಿ ದುಬಾರಿ: ರಾಜ್ಯದಲ್ಲಿ ಇಂದಿನ ತರಕಾರಿ ಬೆಲೆ ಹೀಗಿದೆ..

ಸ್ಥಳಕ್ಕೆ ಗುರುಮಠಕಲ್ ಪಿಐ ಖಾಜಾಹುಸೇನ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ. ಸದ್ಯ ಈ ಕುರಿತು ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.