ನಾಡ ಬಂದೂಕು ಸಿಡಿಸಿ ಕೇಂದ್ರ ಸಚಿವರಿಗೆ ಸ್ವಾಗತ ಪ್ರಕರಣ: ಮೂವರು ಕಾನ್ಸ್​​ಟೇಬಲ್​​​​​ ಅಮಾನತು!

author img

By

Published : Aug 19, 2021, 5:15 PM IST

Three constables suspended over using of gun for welcomed the bhagwanth khuba

ನಿನ್ನೆ ನಾಡ ಬಂದೂಕು ಸಿಡಿಸಿ ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸ್ವಾಗತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುವರು ಕಾನ್ಸ್​​ಟೇಬಲ್​​ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಯಾದಗಿರಿ: ನಾಡ ಬಂದೂಕು ಸಿಡಿಸಿ ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸ್ವಾಗತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದ ಮೇಲೆ ಮೂವರು ಪೊಲೀಸ ಕಾನ್ಸ್​​ಟೇಬಲ್​​ಗಳನ್ನು ಅಮಾನತು ಮಾಡಿ ಎಸ್​ಪಿ ಡಾ. ವೇದಮೂರ್ತಿ ಆದೇಶ ಹೊರಡಿಸಿದ್ದಾರೆ.

ಪೊಲೀಸ್​ ಕಾನ್ಸ್​ಟೇಬಲ್​​​ ಗಳಾದ ವಿರೇಶ್, ಸಂತೋಷ ಹಾಗೂ ಮೈಬೂಬ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಎಸ್​ಪಿ ಡಾ.ವೇದಮೂರ್ತಿ ಮಾಹಿತಿ‌ ನೀಡಿದ್ದಾರೆ. ನಿನ್ನೆ ಕೇಂದ್ರ ಸಚಿವ ಭಗವಂತ ಖೂಬಾ ಜನಾಶೀರ್ವಾದ ಯಾತ್ರೆಯೊಂದಿಗೆ ಯರಗೋಳ ಗ್ರಾಮಕ್ಕೆ ಆಗಮಿಸಿದಾಗ ನಾಡಬಂದೂಕು ಸಿಡಿಸಿ ಸ್ವಾಗತ ಮಾಡಲಾಗಿತ್ತು. ಅಲ್ಲದೇ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ ಕೂಡಾ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.