ಬಜೆಟ್‌ ಮೇಲಿನ ಚರ್ಚೆ.. ಸಿದ್ದರಾಮಯ್ಯ ಹೇಳಿಕೆ ಪ್ರಸ್ತಾಪಿಸಿದ ಹೆಚ್‌ಡಿಕೆ ವಿರುದ್ಧ ಕಾಂಗ್ರೆಸ್‌ ಶಾಸಕರು ಗರಂ

By

Published : Mar 9, 2022, 1:22 PM IST

Updated : Feb 3, 2023, 8:19 PM IST

thumbnail

ವಿಧಾನಸಭೆ ಕಲಾಪದಲ್ಲಿ ಬಜೆಟ್‌ ಮೇಲಿನ ಚರ್ಚೆ ವೇಳೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿದ್ದನ್ನೇ ಪ್ರಸ್ತಾಪ ಮಾಡುತ್ತಿದ್ದ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್‌ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು. ಹೆಚ್​ಡಿಕೆ ಮಾತನಾಡುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್‌ ನಾಯಕ ಯು ಟಿ ಖಾದರ್‌ ಅವರು ನೀವು ಸಿಎಂ ಮಂಡಿಸಿದ ಬಜೆಟ್‌ ಮೇಲೆ ಮಾತನಾಡುತ್ತಿದ್ದೀರಾ? ಇಲ್ಲ, ನಿನ್ನೆ ಸಿದ್ದರಾಮಯ್ಯ ಮಾತನಾಡಿದ್ದರ ಮೇಲೆನಾ ಎಂದು ಪ್ರಶ್ನಿಸಿದರು. ಈ ವೇಳೆ ಸದನದಲ್ಲಿ ಭಾರಿ ಗದ್ದಲ ಉಂಟಾಯಿತು. ಜೆಡಿಎಸ್‌ ಬಿಜೆಪಿಯ ಬಿ ಟೀಂ ಎಂದು ಕೂಗಿ ಕಾಂಗ್ರೆಸ್​ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

Last Updated : Feb 3, 2023, 8:19 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.