ಎಸ್‌ಡಿಪಿಐ ಪ್ರತಿಭಟನೆ ವೇಳೆ ತಳ್ಳಾಟ.. ನೆಲಕ್ಕೆ ಬಿದ್ದ ಡಿಸಿಪಿ, 50ಕ್ಕೂ ಹೆಚ್ಚು ಕಾರ್ಯಕರ್ತರು ವಶಕ್ಕೆ

By

Published : Sep 23, 2022, 8:12 AM IST

Updated : Feb 3, 2023, 8:28 PM IST

thumbnail

ಹುಬ್ಬಳ್ಳಿ: ಎಸ್‌ಡಿಪಿಐ ಹಾಗೂ ಪಿಎಫ್​ಐ ಕಚೇರಿಗಳ ಮೇಲೆ ಎನ್ಐ​ಎ ದಾಳಿ ಖಂಡಿಸಿ ಪ್ರತಿಭಟನೆ ವೇಳೆ ಕಾರ್ಯಕರ್ತರ ತಳ್ಳಾಟದಿಂದಾಗಿ ಕಾನೂನು ಸುವ್ಯವಸ್ಥೆ ಡಿಸಿಪಿ ಸಾಹಿಲ್ ಬಾಗ್ಲಾ ನೆಲಕ್ಕೆ ಬಿದ್ದರುವ ಘಟನೆ ನಡೆದಿದೆ. ಹುಬ್ಬಳ್ಳಿ ಕೌಲ್ ಪೇಟೆಯಲ್ಲಿ ಎನ್​ಐಎ ದಾಳಿ ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.‌ ಪ್ರತಿಭಟನಾಕಾರರನ್ನು ಬಂಧಿಸುವ ವೇಳೆ ಗಲಭೆ ವಾತಾವರಣ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ತಳ್ಳಿಕೊಂಡು ಬಂದ ಕಾರಣ ಡಿಸಿಪಿ ಕೆಳಗೆ ಬಿದ್ದಿದ್ದಾರೆ. ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಹು-ಧಾ ಪೊಲೀಸ್ ಆಯುಕ್ತ ಲಾಬೂರಾಮ್, ರಸ್ತೆಯನ್ನ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದವರನ್ನ ಚದುರಿಸಿ, ಸುಗಮ ‌ಸಂಚಾರಕ್ಕೆ ಅನುವು ಮಾಡಲಾಗಿದೆ. 50 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನ ವಶಕ್ಕೆ ಪಡೆದಿದ್ದೇವೆ. ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ-ಧಾರವಾಡದಲ್ಲಿ ಪೊಲೀಸ್‌ರನ್ನ ನಿಯೋಜಿಸಿಲಾಗಿದೆ. ಪ್ರತಿಭಟನಾನಿರತರ ವಿಚಾರಣೆ ಬಳಿಕ ಇನ್ನಷ್ಟು ಮಾಹಿತಿ ಲಭ್ಯವಾಗಲಿದೆ ಎಂದರು.

Last Updated : Feb 3, 2023, 8:28 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.