ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ.. ನಾಲ್ವರ ಸಾವು, ಐದು ಜನರಿಗೆ ಗಂಭೀರ ಗಾಯ

By

Published : Jan 25, 2023, 5:56 PM IST

Updated : Feb 3, 2023, 8:39 PM IST

thumbnail

ತಿರುಪತಿ (ಆಂಧ್ರಪ್ರದೇಶ): ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಜನರು ಮೃತಪಟ್ಟಿರುವ ಘಟನೆ ಇಲ್ಲಿಯ ಚಂದ್ರಗಿರಿ ಮಂಡಲದ ಕಲ್​ರೋಡ್​ಪಲ್ಲಿಯಲ್ಲಿ ಸಂಭವಿಸಿದೆ. ಅನಂತ ತೆಂಬುಕರ್, ಮಯೂರ್ ಮಟನ್, ಋಷಿಕೇಶ ಜಂಗಮ, ಅಜಯ್ ನಂಗನಾಡ್ ಲುಟ್ಟೆ ಮೃತರು. ಒಟ್ಟು ಒಂಬತ್ತು ಜನ ಕಾರಿನಲ್ಲಿ ಪ್ರಾಯಣಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಇನ್ನೂ 5 ಜನ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಿರುಪತಿಯ ರುಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ 9ಜನರು ಸ್ನೇಹಿತರಾಗಿದ್ದು, ಮಹಾರಾಷ್ಟ್ರದ ಸೋಲಾಪುರದವರೆಂದು ತಿಳಿದು ಬಂದಿದೆ. ಇವರು ತಿರುಮಲದಲ್ಲಿ ದೇವರ ದರ್ಶನ ಪಡೆದು ಕಾಣಿಪಾಕಂಗೆ ಹೋಗುವಾಗ ಈ ದುರ್ಘಟನೆ ನಡೆದಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಇದನ್ನೂ ಓದಿ: ಮಲೆಮಹದೇಶ್ವರ ಬೆಟ್ಟದ ಬಳಿ ಗುಜರಾತ್ ಬಸ್ ಪಲ್ಟಿ: ಜಗಳೂರು ಬಳಿ ಅಪಘಾತದಲ್ಲಿ ಆರು ಜನರಿಗೆ ಗಾಯ

Last Updated : Feb 3, 2023, 8:39 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.