ಮಕ್ಕಳ ಕಳ್ಳರ ವದಂತಿ.. ಪೊಲೀಸರಿಗೆ ನಾಲ್ವರನ್ನು ಹಿಡಿದುಕೊಟ್ಟ ವಿಜಯಪುರ ಜನತೆ

By

Published : Sep 24, 2022, 5:53 PM IST

Updated : Feb 3, 2023, 8:28 PM IST

thumbnail

ವಿಜಯಪುರ: ನಗರದಲ್ಲಿ ಮಕ್ಕಳ ಕಳ್ಳರು ಇರುವ ವಂದತಿ ಹಿನ್ನೆಲೆ ಮತ್ತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ನಗರದ ಸ್ಯಾಟ್​ಲೈಟ್​ ಬಳಿ ನಡೆದಿದೆ. ದೆಹಲಿ ಮೂಲದ ನಾಲ್ವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ನಾಲ್ವರು ಹೂವು ಮಾರಾಟಗಾರರಾಗಿದ್ದರು. ಸ್ಯಾಟ್​ಲೈಟ್​ ಬಸ್ ನಿಲ್ದಾಣದಲ್ಲಿ ಮಕ್ಕಳ ಕಳ್ಳತನಕ್ಕೆ ಬಂದಿದ್ದಾರೆ ಎಂದು ಆರೋಪಿಸಿ ಸ್ಥಳೀಯರೇ ಹಿಡಿದುಕೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ‌ನಡೆಸಿ, ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗಾಂಧಿ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Last Updated : Feb 3, 2023, 8:28 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.