ದತ್ತ ಜಯಂತಿ: ಚಿಕ್ಕಮಗಳೂರಿನ ಪ್ರಮುಖ ರಸ್ತೆಗಳಲ್ಲಿ ಪೊಲೀಸರ ಪಥ ಸಂಚಲನ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ದತ್ತ ಜಯಂತಿ ಆಚರಣೆ ನಡೆಯಲಿದೆ. ಇಂದು ನಗರದಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. ಬಸವನಹಳ್ಳಿ ರಸ್ತೆ, ಎಂ.ಜಿ ರಸ್ತೆ, ಐಜಿ ರಸ್ತೆ, ಉಪ್ಪಳ್ಳಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಮೆರವಣಿಗೆಯಲ್ಲಿ ಸಾಗಿದರು. ವಿವಿಧ ಜಿಲ್ಲೆಗಳಿಂದ ಸುಮಾರು 4,500 ಕ್ಕೂ ಅಧಿಕ ಪೊಲೀಸರು ಭಾಗಿಯಾಗಿದ್ದರು. ಈ ಮೂಲಕ ಯಾವುದೇ ಅಹಿತಕರ ಘಟನಾವಳಿ ನಡೆಯದಂತೆ ಎಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.
Last Updated : Feb 3, 2023, 8:34 PM IST