ಚಾಮರಾಜನಗರದಲ್ಲಿ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ: ರೈತರ ಮೇಲೆ ದಾಳಿ ಮಾಡಿದ ಹುಲಿ ಸೆರೆ
ಇಬ್ಬರು ರೈತರನ್ನು ಗಾಯಗೊಳಿಸಿ, ಗುಂಡ್ಲುಪೇಟೆ ತಾಲೂಕಿನ ಲಕ್ಕಿಪುರ ಗ್ರಾಮಕ್ಕೆ ಹೊಂದಿಕೊಂಡಂತಿರುವ ಶಿವಪ್ಪ ಎಂಬವರ ಬಾಳೆ ತೋಟದಲ್ಲಿ ಅಡಗಿ ಕುಳಿತ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಇಂದು ಬೆಳಗ್ಗೆ ಮಳೆಯ ಸೆರೆಹಿಡಿದರು. ಕಾರ್ಯಾಚರಣೆಗೆ ಅಭಿಮನ್ಯು ಹಾಗೂ ಶ್ರೀಕಂಠ ಎಂಬೆರಡು ಆನೆಗಳನ್ನು ಬಳಸಲಾಗಿತ್ತು. ಹುಲಿಗೆ ಅಧಿಕಾರಿಗಳು ಅರಿವಳಿಕೆ ಚುಚ್ಚುಮದ್ದು ನೀಡಿ ಬಲೆ ಬೀಸಿದ್ದಾರೆ. ಹುಲಿಯನ್ನು ಮೈಸೂರಿಗೆ ರವಾನಿಸಲಾಗಿದೆ.
Last Updated : Feb 3, 2023, 8:24 PM IST