ರೈತರ ಪ್ರತಿಭಟನೆಯಲ್ಲಿ ಭಾಗವಹಿಸುವವರ ಸಂಖ್ಯೆ ಕಡಿಮೆಯಾಗಿಲ್ಲ; ಟಿಕಾಯತ್
ನವದೆಹಲಿ: ರಾಜಧಾನಿಯಲ್ಲಿ ನಡೆಯುತ್ತಿರುವ ಆಂದೋಲನದಲ್ಲಿ ರೈತರ ಭಾಗವಹಿಸುವಿಕೆ ಕಡಿಮೆಯಾಗಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ವಕ್ತಾರ ರಾಕೇಶ್ ಟಿಕಾಯತ್ ಹೇಳಿದ್ದಾರೆ. ಈಟಿವಿ ಭಾರತ ಜೊತೆ ಮಾತನಾಡಿದ ಅವರು, ಪ್ರತಿಭಟನಾ ಸ್ಥಳಗಳಲ್ಲಿ ರೈತರ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ಹೇಳಿಕೆಯನ್ನು ತಳ್ಳಿಹಾಕಿದರು. ಹಾಗೆಯೇ ಫೆಬ್ರವರಿ 18 ರಂದು ನಡೆಯಲಿರುವ ರಾಷ್ಟ್ರವ್ಯಾಪಿ ''ರೇಲ್ ರೋಕೊ'' (ರೈಲ್ವೆ ದಿಗ್ಬಂಧನ) ಗೆ ಈ ಬಾರಿ ಯಾವುದೇ ವಿನಾಯಿತಿ ಇರುವುದಿಲ್ಲ ಎಂದು ಪುನರುಚ್ಚರಿಸಿದರು.