ಭೀಕರ ರಸ್ತೆ ಅಪಘಾತದಲ್ಲಿ ಎಂಟು ಜನರ ಸಾವು: ‘ಸಂತೋಷ’ಪುರದಲ್ಲಿ ಮಡುಗಟ್ಟಿದ ದುಃಖ!

By

Published : Nov 13, 2019, 11:28 PM IST

thumbnail

ಬಸ್​ ಮತ್ತು ಟೆಂಪೋ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಎಂಟು ಜನರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಸಿಕರ್​ ಜಿಲ್ಲೆಯಲ್ಲಿ ನಡೆದಿದೆ. ರಿಂಗಸ್​ನಿಂದ ಖಾಟೂ ಕಡೆ ಬಸ್​ ತೆರಳುತ್ತಿತ್ತು. ಅತ್ತ ಖಾಟೂ ಕಡೆಯಿಂದ ರಿಂಗಸ್​ ಕಡೆ ಟೆಂಪೋ ಹೋಗುತ್ತಿತ್ತು. ಸಂತೋಷಪುರದಲ್ಲಿ ಬಸ್​ ಮತ್ತು ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಎಂಟು ಜನ ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದ ಅಧಿಕಾರಿಗಳು ಘಟನಾಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.