ದೆಹಲಿ ಹಿಂಸಾಚಾರ: ಕೇಂದ್ರದ ವಿರುದ್ಧ ಗುಡುಗಿದ ಸೋನಿಯಾ, ಮನಮೋಹನ್ ಸಿಂಗ್​

By

Published : Feb 27, 2020, 3:18 PM IST

thumbnail

ದೆಹಲಿ ಹಿಂಸಾಚಾರ ಖಂಡಿಸಿ ಸೋನಿಯಾ ಗಾಂಧಿ ನೇತೃತ್ವದ ಕಾಂಗ್ರೆಸ್​ ನಿಯೋಗ ರಾಷ್ಟ್ರಭವನಕ್ಕೆ ತೆರಳಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ಗೆ ಮನವಿ ಸಲ್ಲಿಸಿದೆ. ಈ ವೇಳೆ ಮಾತನಾಡಿದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ದೆಹಲಿಯಲ್ಲಿ ಕಳೆದ 4 ದಿನಗಳಿಂದ ಆಗಿರುವ ಗಲಭೆ ಅತ್ಯಂತ ಕಳವಳಕಾರಿ. ಇದು ಕೇಂದ್ರ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಕೇಂದ್ರ ಸರ್ಕಾರವನ್ನು ದೂರಿದರು. ಇನ್ನೊಂದೆಡೆ ಹಿಂಸಾಚಾರ ನಿಯಂತ್ರಿಸುವಲ್ಲಿ ಗೃಹ ಸಚಿವ ಅಮಿತ್ ಶಾ ವಿಫಲರಾಗಿದ್ದಾರೆ. ಸಚಿವ ಸ್ಥಾನದಿಂದ ಅವರನ್ನು ಅಮಾನತುಗೊಳಿಸಿ ಎಂದು ರಾಷ್ಟ್ರಪತಿ ಕೋವಿಂದ್​ಗೆ ಸಲ್ಲಿಸಿದ ಪತ್ರದಲ್ಲಿ ಕಾಂಗ್ರೆಸ್ ನಿಯೋಗ ಮನವಿ ಸಲ್ಲಿಸಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.