ಹುಬ್ಬಳ್ಳಿಯಲ್ಲಿ ಯುವಜನೋತ್ಸವ: ಸಂಭ್ರಮದ ಸಾಂಸ್ಕೃತಿಕ ಸಂಜೆ

By

Published : Jan 13, 2023, 1:03 PM IST

Updated : Feb 3, 2023, 8:38 PM IST

thumbnail

ಧಾರವಾಡ: ಅವಳಿ ನಗರದಲ್ಲಿ ಆಯೋಜಿಸಿರುವ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮವನ್ನು ಹುಬ್ಬಳ್ಳಿ ರೈಲ್ವೆ ಮೈದಾನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಸಂಜೆ ಉದ್ಘಾಟಿಸಿದ್ದಾರೆ. ಮೊದಲ ದಿನವಾದ ನಿನ್ನೆ ಸಂಜೆ ಕರ್ನಾಟಕ ಕಾಲೇಜು ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಕೆ.ಸಿ.ನಾರಾಯಣ ಗೌಡ ದೀಪ ಬೆಳಗಿಸಿ ಚಾಲನೆ ನೀಡಿದ್ದರು. ಶಾಸಕರಾದ ಅರವಿಂದ ಬೆಲ್ಲದ್​, ಅಮೃತ ದೇಸಾಯಿ, ಬೆಳಗಾವಿ ಶಾಸಕ ಅಭಯ ಪಾಟೀಲ್, ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲೀನಿ ರಜನೀಶ, ಮಹಾನಗರ ಪಾಲಿಕೆ ಆಯುಕ್ತ ಡಾ.ಗೋಪಾಲ ಕೃಷ್ಣ ಬಿ., ಕ.ವಿ.ವಿ ಕುಲಸಚಿವ ಯಶಪಾಲ ಕ್ಷೀರಸಾಗರ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಡಿ.ಸಿ.ಎಫ್ ಸೋನಲ್ ವೃಷ್ಣಿ, ನೆಹರು ಯುವ ಕೇಂದ್ರದ ನೋಡಲ್ ಅಧಿಕಾರಿ ಶ್ಯಾಮ್ ಸನ್ ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು. ಖ್ಯಾತ ಗಾಯಕ ವಿಜಯ್​ ಪ್ರಕಾಶ್​ ಹಾಗೂ ತಂಡದವರು ತಡರಾತ್ರಿವರೆಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

Last Updated : Feb 3, 2023, 8:38 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.