ಅಹಮದಾಬಾದ್​​​​ನಿಂದ ಬೆಳಗಾವಿಗೆ ಆಗಮಿಸುತ್ತಿದ್ದ ಬಸ್‌ಗೆ ಬೆಂಕಿ - 16 ಪ್ರಯಾಣಿಕರು ಸುರಕ್ಷಿತ!

By ETV Bharat Karnataka Team

Published : Oct 20, 2023, 7:37 AM IST

thumbnail

ಅಹಮದಾಬಾದ್​​ (ಗುಜರಾತ್): ಗುಜರಾತ್​ನ ಅಹಮದಾಬಾದ್​​​​ನಿಂದ ರಾಜ್ಯದ ಬೆಳಗಾವಿಗೆ ತೆರಳುತ್ತಿದ್ದ ಬಸ್‌ಗೆ ಬೆಂಕಿ ತಗುಲಿದೆ. ಗುಜರಾತ್​ನ ವಲ್ಸಾದ್ ಜಿಲ್ಲೆಯ ಪಾರ್ಡಿ ಗ್ರಾಮದ ಬಳಿ ಬಸ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್‌ನಲ್ಲಿ 16 ಪ್ರಯಾಣಿಕರಿದ್ದರು. ಎಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಅಗ್ನಿ ಅವಘಡ ಹಿನ್ನೆಲೆ ಮುಂಬೈ - ಅಹಮದಾಬಾದ್ ಹೆದ್ದಾರಿ 2 ಗಂಟೆಗಳ ಕಾಲ ಬಂದ್ ಆಗಿತ್ತು. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಕೋರಮಂಗಲದಲ್ಲಿ ಅಗ್ನಿ ಅವಘಡ : ರೆಸ್ಟೋರೆಂಟ್ ಸುಟ್ಟು ಕರಕಲು.. ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ ಯುವಕ

ಮತ್ತೊಂದು ಅಗ್ನಿ ದುರಂತ: ನಿನ್ನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ದೊಡ್ಡ ಮಟ್ಟದ ಅಗ್ನಿ ಅವಘಡ ಸಂಭವಿಸಿತ್ತು. ಗುರುವಾರ ಬೆಳಗ್ಗೆ ಕೋರಮಂಗಲ ಸಮೀಪದ ಮಡ್ ಪೈಪ್ ರೆಸ್ಟೋರೆಂಟ್​ನ ಅಡುಗೆ ಕೋಣೆಯಲ್ಲಿ ಅಗ್ನಿ ಕಾಣಿಸಿಕೊಂಡು, ಬಳಿಕ ಸಂಪೂರ್ಣ ರೆಸ್ಟೋರೆಂಟ್ ಸುಟ್ಟು ಕರಕಲಾಗಿದೆ. ನೋಡ ನೋಡುತ್ತಿದ್ದಂತೆ ಅಗ್ನಿ ಸಂಪೂರ್ಣ ಕೋಣೆ ಆವರಿಸಿ, ಕಟ್ಟಡದ ಮೇಲಂತಸ್ತು ಅಗ್ನಿಗಾಹುತಿ ಆಗಿದೆ. 8 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.