ಸತ್ಯಸಾಯಿ ಬೆಟ್ಟದಲ್ಲಿ ಪ್ರತ್ಯಕ್ಷವಾದ ಚಿರತೆ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ.. ವಿಡಿಯೋ

By ETV Bharat Karnataka Team

Published : Dec 1, 2023, 5:09 PM IST

thumbnail

ಸತ್ಯಸಾಯಿ: ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಮಡಕಶಿರ ಎಂಬ ಪಟ್ಟಣದಲ್ಲಿ ನಿನ್ನೆ ಸಂಜೆ ವೇಳೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಆ ಪ್ರದೇಶದ ಜನರು ಭಯಭೀತರಾಗಿದ್ದಾರೆ. ಗುಡ್ಡದಲ್ಲಿ ಕಾಣಿಸಿಕೊಂಡ ಚಿರತೆ ಕೆಲಕಾಲ ಅಲ್ಲೇ ಕುಳಿತುಕೊಂಡಿದ್ದು, ಬಳಿಕ ಬೇರೊಂದು ಕಡೆಗೆ ತೆರಳಿದೆ. 

ಬೆಟ್ಟದಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಈ ಬಗ್ಗೆ ಸ್ಥಳೀಯರೊಬ್ಬರ ಪ್ರಕಾರ, ಚಿರತೆ ಬೆಟ್ಟದಲ್ಲಿ ಬಹಳ ಹೊತ್ತು ತಿರುಗಾಡಿತ್ತು. ಸೂರ್ಯಾಸ್ತದ ವೇಳೆ ಅಲ್ಲಿಂದ ಬೆಟ್ಟದ ಹಿಂಭಾಗಕ್ಕೆ ಹೋಗಿದೆ. ಯಾವ ಕ್ಷಣದಲ್ಲಾದರೂ ಜನರ ಮೇಲೆ ದಾಳಿ ಮಾಡುವ ಸಾಧ್ಯತೆ ಹೆಚ್ಚಿದೆ. ಆದ ಕಾರಣ ಕೂಡಲೇ ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಜತೆಗೆ ಜನ ವಾಸಸ್ಥಳಕ್ಕೆ ಚಿರತೆ ನುಗ್ಗದಂತೆ ತಡೆಯಬೇಕು. ಚಿರತೆಯನ್ನು ಸೆರೆ ಹಿಡಿದು ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಬೇಕು ಎಂದು ಅಲ್ಲಿಯ ಸ್ಥಳೀಯರ ಆಗ್ರಹಿಸಿದ್ದಾರೆ. ಚಿರತೆಯ ಸೆರೆಯಾದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ವೈರಲ್​ ಆಗಿದೆ. 

ಇದನ್ನೂ ಓದಿ: ಮೈಸೂರು: ಕಡಕೊಳ ಕೈಗಾರಿಕಾ ಪ್ರದೇಶದಲ್ಲಿ ಹುಲಿ ಓಡಾಟ, ಸಿಸಿಟಿವಿಯಲ್ಲಿ ದೃಶ್ಯ ಸೆರೆ 

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.