ಮಂಗಳೂರು: ನಿಂತಿದ್ದ ಬೈಕ್​ಗೆ ವಿರುದ್ಧ ದಿಕ್ಕಿನಲ್ಲಿ ಬಂದು ಗುದ್ದಿದ ಬಸ್​.. ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ

By ETV Bharat Karnataka Team

Published : Sep 17, 2023, 9:07 PM IST

thumbnail

ಮಂಗಳೂರು: ರಸ್ತೆ ದಾಟಲೆಂದು ನಿಂತಿದ್ದ ಬೈಕ್​ಗೆ ವಿರುದ್ಧ ದಿಕ್ಕಿನಲ್ಲಿ ಬಂದ ಖಾಸಗಿ ಬಸ್​ವೊಂದು ರಭಸವಾಗಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡ ಘಟನೆ ಭಾನುವಾರ ನಗರದ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್​ನ ಹೊಸಬೆಟ್ಟು ಸಮೀಪ ನಡೆದಿದೆ. ಇದರ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್​ ಆಗಿದೆ. 

ಭಾನುವಾರ ಬೆಳ್ಳಂಬೆಳಗ್ಗೆ 7.55ರ ವೇಳೆಗೆ ಖಾಸಗಿ ಎಕ್ಸ್‌ಪ್ರೆಸ್​ ಬಸ್​ ಶರವೇಗದಿಂದ ಬಂದು ಬೈಕ್​ಗೆ ಗುದ್ದಿದೆ. ಈ ಘಟನೆಯಲ್ಲಿ ಬೈಕ್ ಸವಾರರಾದ ಪಕ್ಷಿಕೆರೆ ಹೊಸಕಾಡು ನಿವಾಸಿ ಅಬ್ದುಲ್ ಖಾದರ್ ಅರ್ಫಾನ್ ಮತ್ತು ಹಳೆಯಂಗಡಿ ಇಂದಿರಾ ನಗರದ ನಿವಾಸಿ‌ ಅಮೀರ್ ಸಾಹಿಲ್ ಎಂಬುವವರು ಗಾಯಗೊಂಡಿದ್ದಾರೆ. ಇದರಲ್ಲಿ ಅರ್ಫಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೊಸಬೆಟ್ಟು ಬಳಿ ರಸ್ತೆ ದಾಟಲು ಬೈಕ್​ ಡಿವೈಡರ್ ಬಳಿ ನಿಂತಿತ್ತು. ಈ ವೇಳೆ ವೇಗದಲ್ಲಿ ಬಂದ ಮಂಗಳೂರು - ಉಡುಪಿ ಖಾಸಗಿ ಬಸ್ ಅಡ್ಡಲಾಗಿ ಬಂದು ಗುದ್ದಿಕೊಂಡು ಹೋಗಿದೆ. ಪರಿಣಾಮ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುಗಳನ್ನು ನಗರದ ಎ.ಜೆ. ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್​ ಚಾಲಕ ಡೆಲ್ಸನ್ ಕ್ಯಾಸ್ಟಲಿನೋ ಎಂಬಾತನ ವಿರುದ್ಧ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೈಸೂರು: ಮಹಿಳಾ ಪಿಎಸ್ಐ ಪುತ್ರ ವ್ಹೀಲಿಂಗ್​ ಮಾಡುತ್ತಿದ್ದ ಬೈಕ್​ ಡಿಕ್ಕಿ, ವೃದ್ಧ ಸಾವು.. ಪಿಎಸ್​ಐ ವರ್ಗಾವಣೆ

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.