ಬೆಂಕಿಗೆ ದಗ ದಗನೇ ಹೊತ್ತಿ ಉರಿದ ಬಸ್..42 ಮಂದಿ ಜೀವ ಸೇಫ್
ಪುಣೆ ನಗರದಲ್ಲಿ ಮಂಗಳವಾರ ರಾಜ್ಯ ಸಾರಿಗೆ ಬಸ್ಗೆ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ನಲವತ್ತೆರಡು ಪ್ರಯಾಣಿಕರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಯರವಾಡ ಏರಿಯಾದ ಶಾಸ್ತ್ರಿ ಚೌಕ್ನಲ್ಲಿ ಬೆಳಗ್ಗೆ 11:30 ರ ವೇಳೆಗೆ ಬೆಂಕಿ ಅವಘಡ ಸಂಭವಿಸಿದೆ. ಯಾವತ್ಮಲ್ ನಿಂದ ಪುಣೆಯೆಡೆಗೆ ಬಸ್ ಸಂಚರಿಸುತ್ತಿತ್ತು ಎಂದು ತಿಳಿದು ಬಂದಿದೆ. ಬಸ್ನ ಇಂಜಿನ್ ಭಾಗದಲ್ಲಿ ಹೊಗೆ ಬರುವುದನ್ನು ಚಾಲಕ ಹಾಗೂ ನಿರ್ವಾಹಕರು ಗಮನಿಸಿದ್ದಾರೆ. ಈ ವೇಳೆ, ಪ್ರಯಾಣಿಕರಿಗೆ ತಿಳಿಸಿದ್ದರಿಂದ ಅವರು ಬಚಾವ್ ಆಗಿದ್ದಾರೆ. ಬಸ್ನಿಂದ ಪ್ರಯಾಣಿಕರು ಇಳಿದ ಕೂಡಲೇ ಬಸ್ ಬೆಂಕಿಗೆ ಆಹುತಿಯಾಗಿದೆ. ಈ ವೇಳೆ, ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಅದೃಷ್ಟವಶಾತ್ ಯಾರೊಬ್ಬರು ಘಟನೆಯಲ್ಲಿ ಗಾಯಗೊಂಡಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.
Last Updated : Feb 3, 2023, 8:31 PM IST