ಅಥಣಿಯಲ್ಲಿ ಅಪಘಾತ, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ವಿದ್ಯಾರ್ಥಿಗಳು ಪಾರು: ಸಿಸಿಟಿವಿಯಲ್ಲಿ ಸೆರೆ

By ETV Bharat Karnataka Team

Published : Nov 22, 2023, 9:44 PM IST

thumbnail

ಚಿಕ್ಕೋಡಿ: ಟ್ರ್ಯಾಕ್ಟರ್ ಟ್ರೈಲರ್ ಕೊಂಡಿ ಕಳಚಿ ಪಕ್ಕದ ಕಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಅಥಣಿ ಪಟ್ಟಣದಲ್ಲಿ ಸಂಭವಿಸಿದ್ದು, ಈ ವೇಳೆ ಶಾಲೆಗೆ ಹೊರಟಿದ್ದ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪ್ರಾಣಾಪಾಯದಿಂದ ವಿದ್ಯಾರ್ಥಿಗಳು ಪಾರು: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಎಸ್ ಎಂ ಎಸ್ ಕಾಲೇಜು ಹತ್ತಿರದ ರಡ್ಡೇರಹಟ್ಟಿ ರಸ್ತೆಯಲ್ಲಿ ಮಂಗಳವಾರ ಸಂಜೆ  ಕಾರ್ಖಾನಗೆ ಕಬ್ಬು ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್ ಟ್ರೈಲರ್​ನ ಹಿಂಬದಿ ಟ್ರೈಲರ್ ಕೊಂಡಿ ಕಳಚಿದ ಪರಿಣಾಮ ಪಕ್ಕದ ಕಾರು,ಬೈಕ್ ,ಗೋಡೆಗೆ ಡಿಕ್ಕಿ ಹೊಡೆದಿದೆ. ಹಿಂಬದಿಯಿಂದ ಟ್ರೈಲರ್ ರಸ್ತೆ ಪಕ್ಕದ ಫುಟ್​ಪಾತ್ ಮೇಲೆ ಹರಿದು ಬಂದಿದ್ದು, ಈ ವೇಳೆ ಶಾಲೆಗೆ ಹೊರಟಿದ್ದ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು ಆಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಘಟನೆ ಬಳಿಕ ಅಥಣಿ ಪಟ್ಟಣದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತು. ಆದರೆ, ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟ್ರೈಲರ್ ಎದುರಿಗೆ ನಿಂತ ಕಾರು ಬೈಕ್  ಟ್ರ್ಯಾಕ್ಟರ್ ಟ್ರೈಲರ್ ಡಿಕ್ಕಿ ಹೊಡೆದ ಪರಿಣಾಮ ನಜ್ಜುಗುಜ್ಜಾಗಿವೆ. ಈ ಘಟನೆ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂಓದಿ:ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದ ಆಟೋ: ಎಂಟು ವಿದ್ಯಾರ್ಥಿಗಳಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.