ಗೌಡರ ಹುಟ್ಟುಹಬ್ಬಕ್ಕೆ ಮನೆಗೆ ತೆರಳಿ ಶುಭಾಶಯ ಕೋರಿದ ಬೊಮ್ಮಾಯಿ

By

Published : May 18, 2023, 8:51 PM IST

thumbnail

ಬೆಂಗಳೂರು: ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಸಂಜೆ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ನಿವಾಸಕ್ಕೆ ತೆರಳಿ ದೇವೇಗೌಡರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು. ತಮ್ಮ ನಿವಾಸಕ್ಕೆ ಆಗಮಿಸಿದ ಬಸವರಾಜ ಬೊಮ್ಮಾಯಿ ಅವರನ್ನು ದೇವೇಗೌಡರು ಆತ್ಮೀಯವಾಗಿ ಬರಮಾಡಿಕೊಂಡರು.

ಈ ವೇಳೆ ದೇವೇಗೌಡರಿಗೆ ಶಾಲು ಹಾಕಿ, ಹೂ ಗುಚ್ಛ ನೀಡಿ ಬೊಮ್ಮಾಯಿ ಅವರು ಹುಟ್ಟು ಹಬ್ಬದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಆರ್. ಅಶೋಕ್, ಗೋವಿಂದ ‌ಕಾರಜೋಳ, ಹೆಚ್​​ಡಿ ರೇವಣ್ಣ, ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಹಾಜರಿದ್ದರು. ಕೆಲಹೊತ್ತು ವಿಧಾನಸಭೆ ಚುನಾವಣೆ ಹಾಗೂ ರಾಜ್ಯ ರಾಜಕಾರಣದ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದರು ಎಂದು ಹೇಳಲಾಗುತ್ತಿದೆ.

ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟ್ವೀಟ್ ಮೂಲಕ ಮಾಜಿ ಪ್ರಧಾನಿ ಹೆಚ್​​​​ಡಿ ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಅವರು ಇಟ್ಟ ಹೆಜ್ಜೆಗಳು ನಮ್ಮಂಥ ನಾಯಕರಿಗೆ ಪ್ರೇರಕ ಶಕ್ತಿಯಾಗಿದೆ. ದೇವರು ಅವರಿಗೆ ಆಯುರಾರೋಗ್ಯ ಪ್ರಾಪ್ತಿ ಮಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿಕೆಶಿ ತಿಳಿಸಿದ್ದಾರೆ.

ಇದನ್ನೂ ಓದಿ: 'ಕರೆಂಟ್ ಬಿಲ್ ನಾವು ಕಟ್ಟಲ್ಲ'.. ಬೆಸ್ಕಾಂ ಸಿಬ್ಬಂದಿಯೊಂದಿಗೆ ಮಹಿಳೆ ಮಾತಿನ ಚಕಮಕಿ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.