ದೆಹಲಿಯ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ

By ETV Bharat Karnataka Team

Published : Jan 3, 2024, 9:18 AM IST

thumbnail

ನವದೆಹಲಿ: ದೆಹಲಿಯ ಬವಾನಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಬುಧವಾರ ಮುಂಜಾನೆ ಭಾರಿ ಬೆಂಕಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು, ಗಾಯಗಳಾದ ಬಗ್ಗೆ ಸದ್ಯ ವರದಿ ಆಗಿಲ್ಲ. 

ದೆಹಲಿ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳ ಪ್ರಕಾರ, ಬುಧವಾರ ಬೆಳಗ್ಗೆ 1.40 ರ ಸುಮಾರಿಗೆ ಬೆಂಕಿ ತಗುಲಿರುವ ಬಗ್ಗೆ ಕರೆ ಬಂದಿತ್ತು. ಬವಾನಾ ಕೈಗಾರಿಕಾ ಪ್ರದೇಶದ ಸಾಯಿ ಧರಮ್ ಕಾಂತದ ಬಳಿಯ ಸೆಕ್ಟರ್- 3ರಲ್ಲಿನ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಘಟನೆ ಸಂಭವಿಸಿದೆ. ಮಾಹಿತಿ ಪಡೆದ ತಕ್ಷಣವೇ ಒಟ್ಟು 25 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆಯನ್ನು ನಡೆಸಿದೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಇಲ್ಲಿಯವರೆಗೆ ಯಾವುದೇ ಗಾಯಗಳು ಅಥವಾ ಪ್ರಾಣಾಪಾಯಗಳು ವರದಿಯಾಗಿಲ್ಲ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಕೈಗವಸು ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ; 6 ಸಾವು

ಮೊನ್ನೆ ತಾನೇ ಮಹಾರಾಷ್ಟ್ರದ ಕಾರ್ಖಾನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಛತ್ರಪತಿ ಸಂಭಾಜಿ ನಗರದಲ್ಲಿರುವ ಸನ್‌ಶೈನ್ ಎಂಟರ್‌ಪ್ರೈಸಸ್ ಎಂಬ ಕೈಗವಸು ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ ಸಂಭವಿಸಿ, ಆರು ಜನರು ಮೃತರಾಗಿದ್ದರು. ಘಟನೆಯಲ್ಲಿ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದರು.

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.