ಒಡಿಶಾ ರೈಲು ದುರಂತ: ಸ್ಥಳಕ್ಕೆ ತಲುಪಿದ ಸಿಬಿಐ ತಂಡ

By

Published : Jun 6, 2023, 12:46 PM IST

thumbnail

ಒಡಿಶಾ: ಶುಕ್ರವಾರ ಸಂಜೆ ಸಂಭವಿಸಿದ ಒಡಿಶಾ ರೈಲು ದುರಂತ ದೇಶವನ್ನೇ ಬೆಚ್ಚಿಬೀಳಿಸಿದೆ. ಈಗಾಗಲೇ ಒಡಿಶಾ ರೈಲು ದುರಂತದ ಬಗ್ಗೆ ಸಿಬಿಐ (ಕೇಂದ್ರೀಯ ತನಿಖಾ ಸಂಸ್ಥೆ) ತನಿಖೆ ಕೈಗೆತ್ತಿಕೊಂಡಿದೆ. ವಿಧಿವಿಜ್ಞಾನ ಮತ್ತು ಸಿಬಿಐ ತಂಡಗಳು ಸ್ಥಳಕ್ಕೆ ತಲುಪಿವೆ.  

ಈ ತಂಡಗಳು ಸಾಕ್ಷ್ಯಗಳನ್ನು ಸಂಗ್ರಹಿಸಿ ತನಿಖೆ ನಡೆಸುತ್ತಿದ್ದಾರೆ. ರೈಲ್ವೆ ಇಲಾಖೆ ಅವರಿಗೆ ಬೇಕಾದ ನೆರವು ನೀಡುತ್ತಿದೆ. ಈ ಪ್ರಕರಣ ಸಂಬಂಧ ಎಲ್ಲಾ ಆಯಾಮಗಳಲ್ಲೂ ಸಿಬಿಐ ತನಿಖೆ ನಡೆಸುತ್ತದೆ ಎಂದು ಸೌತ್ ಈಸ್ಟರ್ನ್ ರೈಲ್ವೆಯ ಸಿಪಿಆರ್​ಒ ಆದಿತ್ಯ ಕುಮಾರ್ ಚೌಧರಿ ಮಾಹಿತಿ ನೀಡಿದ್ದಾರೆ.   

ಒಡಿಶಾದ ಬಾಲಸೋರ್‌ನಲ್ಲಿ ನಡೆದ ತ್ರಿವಳಿ ರೈಲುಗಳ ಅಪಘಾತದ ಸ್ಥಳದಲ್ಲಿ 10 ಅಧಿಕಾರಿಗಳ ಸಿಬಿಐ ತಂಡ ಪರಿಶೀಲನೆ ನಡೆಸುತ್ತಿದೆ. ಅಪಘಾತದ ತನಿಖೆಗಾಗಿ ಸಿಬಿಐ ಅಧಿಕಾರಿಗಳು ಆಗಮಿಸಿದ ದೃಶ್ಯಗಳೀಗ ವೈರಲ್​ ಆಗುತ್ತಿವೆ.  

ಇದನ್ನೂ ಓದಿ: ಒಡಿಶಾ ರೈಲು ಅಪಘಾತ:ಇನ್ನೂ ಸಿಗದ 101 ಮೃತದೇಹಗಳ ಗುರುತು..55 ಶವ ಸಂಬಂಧಿಕರಿಗೆ ಹಸ್ತಾಂತರ

ಶುಕ್ರವಾರ ಸಂಜೆ ಸಂಭವಿಸಿರುವ ಈ ದುರ್ಘಟನೆಯಲ್ಲಿ 275 ಮಂದಿ ಸಾವನ್ನಪ್ಪಿದ್ದರೆ, 1,000ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. 101 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.