ತುಮಕೂರು: ಪಾರಿವಾಳಕ್ಕಾಗಿ ಲಾಂಗ್ ಹಿಡಿದ ಯುವಕರ ಗ್ಯಾಂಗ್.. ಪೊಲೀಸರಿಂದ ಬಂಧನ

By ETV Bharat Karnataka Team

Published : Sep 21, 2023, 5:52 PM IST

thumbnail

ತುಮಕೂರು : ಪಾರಿವಾಳ ವಿಚಾರವಾಗಿ ಎರಡು ಗುಂಪಿನ ಯುವಕರ ನಡುವೆ ಗಲಾಟೆ ನಡೆದಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ಕಾಳಿದಾಸ ಬಡಾವಣೆಯಲ್ಲಿ ನಡೆದಿದೆ. ಸಂಜು ಎಂಬುವನು 2 ಸಾವಿರ ರೂಪಾಯಿಗೆ ಅಜಯ್ ಎಂಬುವನಿಂದ ಪಾರಿವಾಳ ಖರೀದಿಸಿದ್ದ. ಪಾರಿವಾಳ ಪಡೆಯುವ ವೇಳೆ ಮುಂಗಡ 800 ರೂ. ನೀಡಿದ್ದ ಸಂಜು, ಉಳಿದ ಹಣ 1200 ರೂ. ಅಜಯ್​ಗೆ ನೀಡಬೇಕಿತ್ತು.

ಉಳಿದ ಹಣ ಕೇಳಿದ್ದಕ್ಕೆ ಸಂಜು ಆಕ್ರೋಶಗೊಂಡು ಲಾಂಗ್ ಸಹಿತ ಅಜಯ್ ಬಳಿ ಹೋಗಿ ಹಲ್ಲೆಗೆ ಮುಂದಾಗಿದ್ದಾನೆ. ಸಂಜು ಸೇರಿ ಆರು ಮಂದಿ ಯುವಕರು ಅಜಯ್ ಮೇಲೆ ಹಲ್ಲೆಗೆ ಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ ಅಡ್ಡ ಬಂದ ಅಜಯ್ ಭಾವ ಸಂಪತ್ ಕೈಗೆ ಗಂಭೀರ ಗಾಯವಾಗಿದೆ. ಕೊರಟಗೆರೆ ಆಸ್ಪತ್ರೆಗೆ ದಾಖಲಿಸಿ ಸಂಪತ್​ಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿ, ಪುಂಡಾಟ ಮೆರೆದಿದ್ದ ಗ್ಯಾಂಗ್ ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯ ಪಿಎಸ್​ಐ ಚೇತನ್ ನೇತೃತ್ವದಲ್ಲಿ ಆರೋಪಿಗಳ ಬಂಧನವಾಗಿದೆ.

ಇದನ್ನೂ ಓದಿ: ಭಟ್ಕಳ: ದುಬಾರಿ ಬೆಲೆಯ 25 ಪಾರಿವಾಳ ಕದ್ದವನ ಬಂಧನ

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.