ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪುಟಿದೇಳಲಿದೆ: ಬಸವರಾಜ ಬೊಮ್ಮಾಯಿ

By

Published : May 13, 2023, 1:28 PM IST

thumbnail

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತದಾರ ನಿರ್ಧಾರಕ್ಕೆ ತಲೆ ಬಾಗಿದ್ದಾರೆ. ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ಈ ಬಾರಿಯ ಚುನಾವಣೆಯಲ್ಲಿ ಎನೆಲ್ಲ ಕೊರತೆಗಳಾಗಿವೆ ಎಂಬುದರ ಬಗ್ಗೆ ಗಮನಹರಿಸಲಾಗುತ್ತದೆ. ಸಂಪೂರ್ಣ ಫಲಿತಾಂಶ ಬಂದ ನಂತರ ಈ ಬಗ್ಗೆ ನಾವು ವಿವರವಾದ ವಿಶ್ಲೇಷಣೆ ಮಾಡುತ್ತೇವೆ. ನಾವು ಈ ಬಗ್ಗೆ ವಿಶ್ಲೇಷಿಸುವುದರ ಜೊತೆಗೆ, ವಿವಿಧ ಹಂತಗಳಲ್ಲಿ ಯಾವ ಕೊರತೆಗಳಾಗಿವೆ ಎಂಬುದರ ಬಗ್ಗೆ ಚರ್ಚಿಸಲಾಗುವುದು. ಈ ಫಲಿತಾಂಶವನ್ನು ಒಪ್ಪಿಕೊಂಡು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪುಟಿದೆದ್ದು ಬರಲಿದೆ ಎಂದು ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ತಮ್ಮ ತವರು ಕ್ಷೇತ್ರವಾದ ಶಿಗ್ಗಾಂವಿಯಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ್ದು, ಕಾಂಗ್ರೆಸ್​ ಅಭ್ಯರ್ಥಿ ಪಠಾಣ್​ ಯಾಸೀರ್​ ಅಹ್ಮದ್​ ಖಾನ್​ ವಿರುದ್ಧ ಸರಿಸುಮಾರು 28 ಸಾವಿರ ಮತಗಳ ಅಂತರದಿಂದ ಹಾಲಿ ಬೊಮ್ಮಾಯಿ ಗೆಲುವು ಸಾಧಿಸಿದ್ದಾರೆ. ಮತ ಎಣಿಕೆ ಕಾರ್ಯ ಇನ್ನೂ ಪ್ರಗತಿಯಲ್ಲಿದೆ.

ಇದನ್ನೂ ಓದಿ: ಗೆಲುವಿನ ಸಂಭ್ರಮದಲ್ಲಿ ಕಾಂಗ್ರೆಸ್​​: ಎಲ್ಲೆಡೆ ಪಟಾಕಿ ಹಚ್ಚಿ ಕಾರ್ಯಕರ್ತರ ಖುಷಿ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.