ಮಲ್ಲೇಶ್ವರಂ ಬಿಜೆಪಿ ಕಚೇರಿಗೆ ಕಾಂಗ್ರೆಸ್, ಕೆಆರ್​ಎಸ್​ ಕಾರ್ಯಕರ್ತರಿಂದ ಮುತ್ತಿಗೆ

By

Published : Mar 6, 2023, 5:21 PM IST

thumbnail

ಬೆಂಗಳೂರು : ಮಲ್ಲೇಶ್ವರಂನ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಹಾಗೂ ಕೆಆರ್​ಎಸ್ ಪಕ್ಷದ ಕಾರ್ಯಕರ್ತರು ಪ್ರತ್ಯೇಕವಾಗಿ ಮುತ್ತಿಗೆ ಹಾಕಲು ಯತ್ನಿಸಿದರು. ಕಾಂಗ್ರೆಸ್ ನಾಯಕರ ಬಗ್ಗೆ ಕಟೀಲ್ ಅವಹೇಳನಕಾರಿ ಹೇಳಿಕೆ ಕೊಟ್ಟಿರುವುದನ್ನು ವಿರೋಧಿಸಿ ಬಿಜೆಪಿ ಕಚೇರಿ ಮುತ್ತಿಗೆಗೆ ಯತ್ನಿಸಿದರು. ಈ ವೇಳೆ, ಪೊಲೀಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.

 ನಳಿನ್ ಕುಮಾರ್ ಕಟೀಲ್​ಗೆ ಧಿಕ್ಕಾರ ಎಂದು ಘೋಷಣೆ ಕೂಗಿದ ಕಾಂಗ್ರೆಸ್​ ಕಾರ್ಯಕರ್ತರು, ಬಿಜೆಪಿ ಕಚೇರಿ ಎದುರು ಘೋಷಣೆ ಹಾಕಿದರು. ಕಾಂಗ್ರೆಸ್ ‌ಮುಖಂಡ ಮನೋಹರ ನೇತೃತ್ವದಲ್ಲಿ ಮುತ್ತಿಗೆಗೆ ಯತ್ನ ನಡೆಸಿದರು. ಬಳಿಕ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಕೆಆರ್​ಎಸ್ ಪಕ್ಷದಿಂದ ಮುತ್ತಿಗೆ ಯತ್ನ : ಇದೇ ವೇಳೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಆಗ್ರಹಿಸಿ ಕೆಆರ್​ಎಸ್​ ಪಕ್ಷದ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದರು. ಏಕಾಏಕಿಯಾಗಿ ಬಿಜೆಪಿ ಕಚೇರಿಗೆ ಆಗಮಿಸಿದ ಕೆಆರ್​ಎಸ್​ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಲೋಕಾಯುಕ್ತ ಟ್ರ್ಯಾಪ್‌ನಲ್ಲಿ ಸಿಲುಕಿರುವ ಮಾಡಾಳ್ ಪುತ್ರ ಪ್ರಕರಣದಲ್ಲಿ ಶಾಸಕ ಮಾಡಾಲ್ ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು.

ಇದನ್ನೂ ಓದಿ : ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ: ಜಿಲ್ಲಾಧ್ಯಕ್ಷರ ಕಾರಿನ ಮೇಲೆ ಮೊಟ್ಟೆ ಎಸೆತ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.