ಚುನಾವಣೆಗಾಗಿ ಎಸ್​ಡಿಪಿಐ ಹಾಗೂ ಕಾಂಗ್ರೆಸ್ ಪಕ್ಷ ಹೊಂದಾಣಿಕೆ ಮಾಡಿಕೊಂಡಿವೆ: ಶೋಭಾ ಕರಂದ್ಲಾಜೆ

By

Published : Mar 19, 2023, 8:53 PM IST

thumbnail

ಚಿಕ್ಕೋಡಿ (ಬೆಳಗಾವಿ): ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷ ಮತ್ತು ಎಸ್​ಡಿಪಿಐ ಹೊಂದಾಣಿಕೆ ಮಾಡಿಕೊಂಡಿವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ನಡೆದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘‘ದೇಶದಲ್ಲಿ ಪಿಎಫ್​ಐ ಸಂಘಟನೆಯ ನಿಷೇಧದ ಬಳಿಕ ಅದರ ಕಾರ್ಯಕರ್ತರು ಎಸ್​ಡಿಪಿಐ (SDPI)ನಲ್ಲಿ ಕಾಣಿಸಿಕೊಂಡಿದ್ದಾರೆ. ಮುಂಬರುವ ಚುನಾವಣೆಗಾಗಿ ಎಸ್​ಡಿಪಿಐ ಹಾಗೂ ಕಾಂಗ್ರೆಸ್ ಪಕ್ಷ ಪರಸ್ಪರ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲೇ ಇದೇ ಕಾಂಗ್ರೆಸ್ ಸರ್ಕಾರ ಪಿಎಫ್​ಐನ ಕಾರ್ಯಕರ್ತರನ್ನ ಜೈಲಿನಿಂದ ಬಿಡುಗಡೆ ಮಾಡಿದರು. ಇದಕ್ಕೆಲ್ಲ ಕಾರಣ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಎಂದು ಆರೋಪಿಸಿದರು. ಈ ಹಿಂದೆ ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿಯನ್ನು ನಿರಪರಾಧಿ ಎಂದು ಡಿಕೆ ಶಿವಕುಮಾರ್​ ಹೇಳಿದ್ದರು ಎಂದು ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ದಲಿತ‌‌ ಮಹಿಳೆಗೆ ಅವಾಚ್ಯ ಪದಗಳಿಂದ ನಿಂದಿಸಿದ ಬಿಜೆಪಿ ಮುಖಂಡ.. ಮಹಿಳೆಯಿಂದ ಕಪಾಳ ಮೋಕ್ಷ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.