'ಮುಂದಿನ ಮುಖ್ಯಮಂತ್ರಿ' ಎಂದು ಬರೆದಿದ್ದ 75 ಕೆಜಿ ಕೇಕ್​​ ಕತ್ತರಿಸಿದ ಸಿದ್ದರಾಮಯ್ಯ

By

Published : Nov 30, 2022, 4:24 PM IST

Updated : Feb 3, 2023, 8:34 PM IST

thumbnail

ಮೈಸೂರು : ಇಲ್ಲಿನ ಕಲಾಮಂದಿರದಲ್ಲಿ ನಡೆದ ಕನಕ ಜಯಂತಿ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಅವರ ಅಭಿಮಾನಿಗಳು 75 ಕೆಜಿಯ ಕೇಕನ್ನು ತಯಾರಿಸಿದ್ದರು. ಇದರಲ್ಲಿ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು ಎಂದು ಬರೆಸಲಾಗಿತ್ತು. ಕೇಕ್​ ಕತ್ತರಿಸಿದ ಸಿದ್ದರಾಮಯ್ಯ ಅವರಿಗೆ ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀಗಳು ಹಾಗೂ ಮೈಸೂರು ಶಾಖಾ ಮಠದ ಶ್ರೀಗಳು ಕೇಕ್ ತಿನ್ನಿಸಿದರು. ಈ ಸಂದರ್ಭದಲ್ಲಿ ಅಭಿಮಾನಿಗಳು ಸಿದ್ದರಾಮಯ್ಯ ಪರ ಜೈಕಾರ ಕೂಗಿದರು.

Last Updated : Feb 3, 2023, 8:34 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.