ಸಿಎಂ ಆಯ್ಕೆ ಬಿಕ್ಕಟ್ಟು: ದೆಹಲಿಗೆ ಬಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​

By

Published : May 16, 2023, 1:49 PM IST

thumbnail

ನವದೆಹಲಿ: ಮುಖ್ಯಮಂತ್ರಿ ಆಯ್ಕೆ ಬಿಕ್ಕಟ್ಟು ಶಮನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಇಂದು ದೆಹಲಿಗೆ ಆಗಮಿಸಿದ್ದಾರೆ. ಇಲ್ಲಿನ ಇಂದಿರಾ ಗಾಂಧಿ ವಿಮಾನ ನಿಲ್ದಾಣದಿಂದ ಅವರು ಬೆಂಬಲಿಗರ ಸಮೇತ ಬಿಗಿ ಭದ್ರತೆಯಲ್ಲಿ ಕಾಂಗ್ರೆಸ್​ ಕಚೇರಿಯತ್ತ ತೆರಳಿದರು. ನಿನ್ನೆಯೇ ಅವರು ದೆಹಲಿಗೆ ಬರಲು ಹೈಕಮಾಂಡ್​ ಸೂಚನೆ ನೀಡಿತ್ತು. ಆದರೆ, ಅನಾರೋಗ್ಯದ ಕಾರಣ ಅವರು ಭೇಟಿಯನ್ನು ರದ್ದು ಮಾಡಿದ್ದರು.

ಇತ್ತೀಚೆಗೆ ಮುಗಿದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಯಶ ಸಾಧಿಸಿ 135 ಸ್ಥಾನಗಳನ್ನು ಗೆದ್ದುಕೊಂಡಿರುವ ಕಾಂಗ್ರೆಸ್​ ಸಿಎಂ ಆಯ್ಕೆಯ ಗೊಂದಲದಲ್ಲಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮಧ್ಯೆ ಹುದ್ದೆಗಾಗಿ ಪ್ರಬಲ ಪೈಪೋಟಿ ನಡೆಯುತ್ತಿದೆ.

ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಠಿಕಾಣಿ ಹೂಡಿದ್ದು, ಸಿಎಂ ಹುದ್ದೆಗಾಗಿ ಹೈಕಮಾಂಡ್​ ಎದುರು ಲಾಬಿ ನಡೆಸುತ್ತಿದ್ದಾರೆ. ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ, ರಾಹುಲ್​ ಗಾಂಧಿ ನೇತೃತ್ವದಲ್ಲಿ ಈ ಸಮಸ್ಯೆ ಪರಿಹಾರಕ್ಕೆ ಇಂದು ಸಭೆ ನಡೆಯಲಿದ್ದು, ಸಿಎಂ ಆಕಾಂಕ್ಷಿಗಳಿಬ್ಬರೂ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಕ್ಕಳಿಗೆ ಏನು ಕೊಡಬೇಕೆಂದು ತಾಯಿಗೆ ಗೊತ್ತಿದೆ: ನಾನೊಬ್ಬನೇ ದೆಹಲಿಗೆ ಹೋಗುತ್ತಿದ್ದೇನೆ: ಡಿಕೆಶಿ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.