ಗುಡಿಸಲಿಗೆ ಬೆಂಕಿ : 500 ಕ್ವಿಂಟಾಲ್ ಹತ್ತಿ, 2 ಬೈಕ್ ಬೆಂಕಿಗಾಹುತಿ
ರಾಯಚೂರು: ಗುಡಿಸಲಿಗೆ ಬೆಂಕಿ ಬಿದ್ದ ಪರಿಣಾಮ ಸುಮಾರು 500 ಕ್ವಿಂಟಾಲ್ ಹತ್ತಿ ಬೆಂಕಿಗಾಹುತಿಯಾಗಿರುವ ಘಟನೆ ದೇವದುರ್ಗ ತಾಲೂಕಿನ ಜಾಗಟಗಲ್ ಗ್ರಾಮದಲ್ಲಿ ನಡೆದಿದೆ. ಹೈವೋಲ್ಟೇಜ್ ವಿದ್ಯುತ್ ತಂತಿ ಗುಡಿಸಲಿಗೆ ತಗುಲಿ ಈ ಅವಘಡ ಸಂಭವಿಸಿದೆ. ಬಳಿಕ ಸುತ್ತಲೂ ಇದ್ದ 5 ಗುಡಿಸಲಿಗೂ ಬೆಂಕಿ ವ್ಯಾಪಿಸಿದೆ. ಪರಿಣಾಮ 500 ಕ್ವಿಂಟಾಲ್ ಹತ್ತಿ, ಎರಡು ಬೈಕ್ಗಳು ಬೆಂಕಿಗಾಹುತಿಯಾಗಿದ್ದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಪೊಲೀಸರು, ಕಂದಾಯ ಇಲಾಖೆ ಅಧಿಕಾರಿಗಳು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಬ್ಬೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಪ್ರತ್ಯೇಕ ಘಟನೆ: ಗೋದಾಮಿಗೆ ಬೆಂಕಿ ಬಿದ್ದು ಫರ್ನೀಚರ್ ಬೆಂಕಿಗಾಹುತಿ.. ವಾಹನಕ್ಕೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿ