ತಿಮ್ಲಾಪುರದ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬೆಂಕಿ; ಮರಗಿಡಗಳು ಕರಕಲು
ತುಮಕೂರು: ತಿಮ್ಲಾಪುರದ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅಪಾರ ಗಿಡ ಮರಗಳು ನಾಶವಾಗಿವೆ. ಮಧುಗಿರಿ ತಾಲೂಕು ಹಾಗೂ ಕೊರಟಗೆರೆ ತಾಲೂಕಿಗೆ ಹೊಂದಿಕೊಂಡಿರುವ ಸಂರಕ್ಷಿತ ಅರಣ್ಯ ಪ್ರದೇಶ ಇದಾಗಿದ್ದು, ನೂರಾರು ಕರಡಿಗಳಿಗೆ ಆಶ್ರಯ ತಾಣವಾಗಿದೆ. ಕಿಡಿಗೇಡಿಗಳು ಅರಣ್ಯಕ್ಕೆ ಬೆಂಕಿ ಇಟ್ಟಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದರು.
Last Updated : Feb 3, 2023, 8:39 PM IST